Webdunia - Bharat's app for daily news and videos

Install App

ಲೈಂಗಿಕ ದೌರ್ಜನ್ಯಕ್ಕೆ ವೀರ್ಯ ಸ್ಖಲನವಾಗಿರಲೇ ಬೇಕಿಲ್ಲ : ಆಂಧ್ರ ಹೈಕೋರ್ಟ್

Webdunia
ಶನಿವಾರ, 22 ಏಪ್ರಿಲ್ 2023 (10:08 IST)
ಅಮರಾವತಿ : ಲೈಂಗಿಕ ದೌರ್ಜನ್ಯದ ಅಪರಾಧ ಸಾಬೀತುಪಡಿಸಲು ವೀರ್ಯ ಸ್ಖಲನ ಆಗಿರಲೇಬೇಕಾದ ಅಗತ್ಯ ಇಲ್ಲ ಎಂದು ಆಂಧ್ರ ಪ್ರದೇಶದ ಹೈಕೋರ್ಟ್ ಹೇಳಿದೆ.

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ ಪ್ರಕರಣದ ಅಡಿಯಲ್ಲಿ ಶಿಕ್ಷೆಗೊಳಗಾಗಿದ್ದ ಅಪರಾಧಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಈ ವಿಚಾರವನ್ನು ನ್ಯಾಯಾಲಯ ಪ್ರಸ್ತಾಪಿಸಿದ್ದು, ಅಪರಾಧಿಗೆ ವಿಧಿಸಿದ್ದ ಶಿಕ್ಷೆಯನ್ನು ಎತ್ತಿಹಿಡಿದಿದೆ.

ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ದಾಖಲಾದ ಸಾಕ್ಷ್ಯಾಧಾರಗಳಲ್ಲಿ ವೀರ್ಯ ಸ್ಖಲನ ಆಗಿರದೆ, ದೌರ್ಜನ್ಯದ ಕುರುಹು ಸಿಕ್ಕರೂ ಪೋಕ್ಸೊ ಕಾಯಿದೆಯ ಸೆಕ್ಷನ್ 3ರ ಅಡಿಯಲ್ಲಿ ವ್ಯಾಖ್ಯಾನಿಸಲಾದ ಲೈಂಗಿಕ ದೌರ್ಜನ್ಯದ ಅಪರಾಧ ಎಂದು ನಿರ್ಣಯಿಸಲು ಅಷ್ಟು ಸಾಕು ಎಂದು ನ್ಯಾಯಮೂರ್ತಿ ಚೀಕಾಟಿ ಮಾನವೇಂದ್ರನಾಥ್ ರಾಯ್ ಅವರು ಅಭಿಪ್ರಾಯಪಟ್ಟಿದ್ದಾರೆ. 

12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವನ್ನು ನಡೆಸಿದಾಗ, ಅದು ಪೋಕ್ಸೋ ಕಾಯಿದೆಯ ಸೆಕ್ಷನ್ 5ರ (ಎಮ್) ಅಡಿಯ ಲೈಂಗಿಕ ದೌರ್ಜನ್ಯಕ್ಕೆ ಸಮನಾಗಿರುತ್ತದೆ. ಹಾಗೂ ಸೆಕ್ಷನ್ 6ರಲ್ಲಿ ಹೇಳಲಾದ ತೀವ್ರ ತರವಾದ ಲೈಂಗಿಕ ದೌರ್ಜನ್ಯವನ್ನು ಮಾಡಿದ ವ್ಯಕ್ತಿಯ ವಿರುದ್ಧ ಅದು ಶಿಕ್ಷೆಯನ್ನು ಸೂಚಿಸುತ್ತದೆ ಎಂದು ನ್ಯಾಯಮೂರ್ತಿ ರಾಯ್ ತಮ್ಮ 22 ಪುಟಗಳ ತೀರ್ಪಿನಲ್ಲಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಕೈ ಹೈಕಮಾಂಡ್‌ ಶಾಕ್‌: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟವರಿಗೂ ನಿರಾಸೆ

ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌: ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್‌ ಹೇಳಿದ್ದೇನು ಗೊತ್ತಾ

Mallikarjun Kharge: ಕಾಲ್ತುಳಿತ ಆಕಸ್ಮಿಕವಾಗಿ ನಡೆದಿದ್ದು ನಮ್ಮವ್ರು ಕ್ಷಮೇನೂ ಕೇಳವ್ರೆ: ಮಲ

Karnataka caste census: 165 ಕೋಟಿ ರೂ. ಖರ್ಚು ಮಾಡಿದ್ದಕ್ಕೆ ಯಾರು ಹೊಣೆ: ವಿ.ಸುನೀಲ್ ಕುಮಾರ್

Arecanut price today: ಅಡಿಕೆ ಬೆಳೆಗಾರರಿಗೆ ನಿರಾಸೆ, ಕೊಬ್ಬರಿ ಬೆಳೆಗಾರರಿಗೆ ಬಂಪರ್

ಮುಂದಿನ ಸುದ್ದಿ