Webdunia - Bharat's app for daily news and videos

Install App

ಭ್ರಷ್ಟಾಚಾರವನ್ನು ಬೇರುಮಟ್ಟದಿಂದ ಕೀಳುತ್ತೇನೆ: ಪ್ರಧಾನಿ ಮೋದಿ ಗುಡುಗು

Webdunia
ಭಾನುವಾರ, 29 ಮೇ 2016 (10:23 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ಎರಡು ವರ್ಷಗಳ ಅಧಿಕಾರವಧಿಯನ್ನು ಪೂರ್ಣಗೊಳಿಸಿದ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು, ಭ್ರಷ್ಟಾಚಾರವನ್ನು ಬೇರುಮಟ್ಟದಿಂದ ನಿರ್ಮೂಲನೆಗೊಳಿಸಿ, ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸಲು ಬದ್ಧ ಎಂದು ಘೋಷಿಸಿದ್ದಾರೆ.
 
ಕಳೆದ ಎರಡು ವರ್ಷಗಳ ಅವಧಿಯಲ್ಲಿ ಸರಕಾರದ ಬೊಕ್ಕಸಕ್ಕೆ ನಷ್ಟವಾಗುತ್ತಿದ್ದ 36 ಸಾವಿರ ಕೋಟಿ ರೂಪಾಯಿಗಳ ಮೂಲವನ್ನು ಪತ್ತೆ ಹಚ್ಚಿದೆ. ದೇಶ ಭ್ರಷ್ಟಾಚಾರದಿಂದ ಮುಕ್ತವಾಗಲೇಬೇಕು ಎಂದರು.
 
ಏಕ್ ನಹೀ ಸುಭಹ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಸರಕಾರದ ಉತ್ತಮ ಅಡಳಿತದಿಂದಾಗಿ ದೇಶದಲ್ಲಿ ಬದಲಾವಣೆ ಬಂದಿದೆ ಎಂದು ಸಂತಸ ವ್ಯಕ್ತಪಡಿಸಿದರು.
 
ವಿಪಕ್ಷಗಳು ಕೇವಲ ರಾಜಕೀಯ ಕಾರಣಗಳಿಗಾಗಿ ಎನ್‌ಡಿಎ ಸರಕಾರದ ವಿರುದ್ಧ ಆರೋಪಗಳನ್ನು ಮಾಡುತ್ತಿವೆ. ಆರೋಪಗಳಲ್ಲಿ ಯಾವುದೇ ರೀತಿಯ ಸತ್ಯಾಂಶವಿಲ್ಲ ಎಂದು ಲೇವಡಿ ಮಾಡಿದರು.
 
ಕಾಂಗ್ರೆಸ್ ಪಕ್ಷವನ್ನು ಹೆಸರಿಸದೆ, ದೇಶದ ಪ್ರಮುಖ ವಿಪಕ್ಷ ಕೇವ ಲ ಅಭಿವೃದ್ಧಿಗೆ ತಡೆಯೊಡ್ಡಲು ಬಯಸುತ್ತಿದೆ. ಆದರೆ, ಜನತೆ ಸತ್ಯಾಸತ್ಯತೆಯನ್ನು ಅರಿತು ಮುಂಬರುವ ದಿನಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಗುಡುಗಿದರು.
 
ಕಲ್ಲಿದ್ದಲು ಹಂಚಿಕೆ ಸೇರಿದಂತೆ ಯುಪಿಎ ಸರಕಾರದಲ್ಲಿ ಹಗರಣಗಳ ಸರಮಾಲೆ ನಡೆದಿವೆ. ಹಿಂದಿನ ಸರಕಾರಕ್ಕೆ ಹೋಲಿಸಿದಲ್ಲಿ ಎನ್‌ಡಿಎ ಸರಕಾರ ಯಾವ ರೀತಿ ಕಾರ್ಯನಿರ್ವಹಿಸುತ್ತಿದೆ ಎನ್ನುವುದು ಜನತೆ ಅರಿತಿದ್ದಾರೆ ಎಂದು ವಿಪಕ್ಷಗಳಿಗೆ ತಿರುಗೇಟು ನೀಡಿದರು. 
 
ಕಳೆದ 15 ದಿನಗಳ ಅವಧಿಯಲ್ಲಿ ಅಭಿವೃದ್ಧಿ ಮತ್ತು ವಿರೋಧವಾದದ ಮಧ್ಯೆ ಸಮರ ನಡೆಯುತ್ತಿದೆ. ಜನತೆ ಯಾವುದೇ ತಮಗೆ ಬೇಕು ಎನ್ನುವುದನ್ನು ಅವರೇ ನಿರ್ಧರಿಸುತ್ತಾರೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. 

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಾಯ್ಲೆಟ್‌ನಲ್ಲಿರುವಾಗಲೇ ಕೋರ್ಟ್ ವಿಚಾರಣೆಗೆ ಹಾಜರಾದ ವ್ಯಕ್ತಿ, Video Viral

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ: ವಿಚಾರ ಬಾಯ್ಬಿಟ್ಟರೆ ವಿಡಿಯೋ ಹರಿಬಿಡುವುದಾಗಿ ಸಂತ್ರಸ್ತೆಗೆ ಬೆದರಿಕೆ

ಸೊಸೆಯನ್ನು ಕೊಂದು ನಾಟಕವಾಡಿದ್ದ ಮಾವ ಹತ್ಯೆಗೂ ಮುನ್ನಾ ಮಾಡಿದ್ದ ನೀಚ ಕೆಲಸ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಮೇಲೆ ರೇಪ್ ಕೇಸ್ ಗೆ ಬಿಗ್ ಟ್ವಿಸ್ಟ್

ಕೇರಳ ಶಾಲೆಗಳಲ್ಲಿ ಜುಂಬಾ ನೃತ್ಜಕ್ಕೆ ಮುಸ್ಲಿಂ ಗುಂಪಿನಿಂದ ವಿರೋಧ

ಮುಂದಿನ ಸುದ್ದಿ
Show comments