Webdunia - Bharat's app for daily news and videos

Install App

ಮಹಾರಾಷ್ಟ್ರ ಸಿಎಂ ಪದಗ್ರಹಣದ ಗದ್ದಲದ ನಡುವೆ ಆಸ್ಪತ್ರೆ ಸೇರಿದ ಏಕನಾಥ್ ಶಿಂಧೆ

Krishnaveni K
ಮಂಗಳವಾರ, 3 ಡಿಸೆಂಬರ್ 2024 (15:21 IST)
ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ನಡೆದು ಇಷ್ಟು ದಿನ ಕಳೆದರೂ ಇನ್ನೂ ನೂತನ ಸಿಎಂ ಯಾರು ಎಂದು ಇನ್ನೂ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿಲ್ಲ. ಈ ನಡುವೆ ಹಂಗಾಮಿ ಸಿಎಂ ಏಕನಾಥ ಶಿಂಧೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಏಕನಾಥ ಶಿಂಧೆ ಕಳೆದ ಎರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದಾರೆ. ಇದರ ನಡುವೆಯೂ ಅವರು ತಮ್ಮ ಊರಿಗೆ ತೆರಳಿದ್ದರು. ಅದಾದ ಬಳಿಕ ಮುಂಬೈಗೆ ವಾಪಸಾಗಿದ್ದರು. ಈ ವೇಳೆ ಆರೋಗ್ಯ ಮತ್ತಷ್ಟು ಬಿಗಡಾಯಿಸಿದೆ. ಹೀಗಾಗಿ ಏಕನಾಥ ಶಿಂಧೆ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯಕ್ಕೆ ಅವರಿಗೆ ಮಲೇರಿಯಾ ಮತ್ತು ಡೆಂಗ್ಯೂ ಜ್ವರ ಪರೀಕ್ಷೆ ಮಾಡಲಾಗಿದ್ದು ಎರಡರಲ್ಲೂ ನೆಗೆಟಿವ್ ವರದಿ ಬಂದಿದೆ ಎನ್ನಲಾಗಿದೆ. ಆದರೆ ಅವರಿಗೆ ಪ್ಲೇಟ್ ಲೆಟ್ ಕಡಿಮೆಯಾಗಿದ್ದು ತೀವ್ರ ಗಂಟಲು ನೋವು ಮತ್ತು ಜ್ವರದಿಂದ ಬಳಲಿದ್ದಾರೆ ಎಂದು ತಿಳಿದುಬಂದಿದೆ. ಸದ್ಯಕ್ಕೆ ಅವರ ಪುತ್ರ ಶ್ರೀಕಾಂತ್ ಶಿಂಧೆ ಜೊತೆಗಿದ್ದಾರೆ.

ಮಹಾರಾಷ್ಟ್ರದಲ್ಲಿ ಮುಂದಿನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಅಧಿಕಾರಕ್ಕೇರಲಿದ್ದು, ಏಕನಾಥ ಶಿಂಧೆ ಪುತ್ರ ಶ್ರೀಕಾಂತ್ ಶಿಂಧೆ ಉಪ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಸುದ್ದಿಗಳಿವೆ. ಡಿಸೆಂಬರ್ 5 ಕ್ಕೆ ಪ್ರಮಾಣ ವಚನ ಕಾರ್ಯಕ್ರಮವಿದ್ದು ಅಷ್ಟರಲ್ಲಿ ಏಕನಾಥ ಶಿಂಧೆ ಗುಣಮುಖರಾಗುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಹಬ್ಬಕ್ಕೂ ಬರದ ಗೃಹಲಕ್ಷ್ಮಿ ಹಣ: ಸರ್ಕಾರ ರೊಕ್ಕ ಕೊಡೋದು ಯಾವಾಗ್ಲೋ ಅಂತಿದ್ದಾರೆ ಮಹಿಳೆಯರು

ಡಾ ದೇವಿಪ್ರಸಾದ್ ಶೆಟ್ಟಿಯವರ ಪ್ರಕಾರ ಕೀಲುನೋವಿಗೆ ಬೆಸ್ಟ್ ಔಷಧಿ ಇದುವೇ

ಬೀದಿನಾಯಿಗಳ ಪಾಡು ಇಂದು ತೀರ್ಮಾನಿಸಲಿರುವ ಸುಪ್ರೀಂಕೋರ್ಟ್

Karnataka Rains: ರಾಜ್ಯಾದ್ಯಂತ ಮಳೆ ಹೆಚ್ಚಾಗಲು ಇದೇ ಕಾರಣ

ಮುಂದಿನ ಸುದ್ದಿ
Show comments