Webdunia - Bharat's app for daily news and videos

Install App

ಸಿಎಂ ಗದ್ದುಗೆ ಏರಿದ ಏಕನಾಥ್ ಶಿಂಧೆ

Webdunia
ಶುಕ್ರವಾರ, 1 ಜುಲೈ 2022 (09:02 IST)
ಮುಂಬೈ : ಮಹಾರಾಷ್ಟ್ರ ರಾಜಕೀಯಕ್ಕೆ ಬಿಜೆಪಿ ಬಿಗ್ ಟ್ವಿಸ್ಟ್ ನೀಡಿದೆ. ಪಕ್ಷದ ಭವಿಷ್ಯದ ದೃಷ್ಟಿಯಿಂದ ಯಾರೂ ಊಹೆ ಮಾಡದ ರೀತಿಯಲ್ಲಿ ದಾಳ ಉರುಳಿಸಿದೆ.
 
ಶಿವಸೇನೆ ರೆಬಲ್ ನಾಯಕ, ಒಂದು ಕಾಲದಲ್ಲಿ ಆಟೋ ಡ್ರೈವರ್ ಆಗಿದ್ದ ಶಿವಸೈನಿಕ ಏಕನಾಥ್ ಶಿಂಧೆಯನ್ನು ಸಿಎಂ ಸ್ಥಾನದಲ್ಲಿ ಪ್ರತಿಷ್ಠಾಪಿಸಿದೆ.

ಶಿವಸೇನೆ ಸ್ಥಾಪಕ ಬಾಳಾ ಠಾಕ್ರೆ ಹೆಸರಲ್ಲಿ ಶಿಂಧೆ ಪ್ರಮಾಣ ಸ್ವೀಕರಿಸಿದ್ದಾರೆ. ಈ ಮೂಲಕ ನಿರ್ಗಮಿತ ಸಿಎಂ ಉದ್ಧವ್ಠಾಕ್ರೆಗೆ ಬಿಜೆಪಿ ಮತ್ತು ಶಿಂಧೆ ಬಣ ಬಿಗ್ ಶಾಕ್ ನೀಡಿದೆ. ಎಲ್ಲರೂ, ಸಿಎಂ ಆಗ್ತಾರೆ ಎಂದು ಭಾವಿಸಿದ್ದ ದೇವೇಂದ್ರ ಫಡ್ನವೀಸ್ ಡಿಸಿಎಂ ಆಗಿದ್ದಾರೆ.

ಮೊದಲು ಸರ್ಕಾರದಿಂದ ಹೊರಗೆ ಉಳಿಯಲು ಬಯಸಿದ್ದರು. ಆದರೆ ಬಿಜೆಪಿ ಹೈಕಮಾಂಡ್ ಒತ್ತಾಸೆ ಮೇರೆಗೆ ಫಡ್ನವೀಸ್ ಸರ್ಕಾರದ ಭಾಗವಾಗಿದ್ದಾರೆ. ಮೂರ್ನಾಲ್ಕು ದಿನದಲ್ಲಿ ನೂತನ ಸಚಿವರ ಪ್ರಮಾಣವಚನ ನಡೆಯುವ ಸಂಭವ ಇದೆ. ಶಿಂಧೆ ಸೇನೆಗೆ ಎಷ್ಟು ಸ್ಥಾನ, ಬಿಜೆಪಿಗೆ ಎಷ್ಟು ಸ್ಥಾನ, ಯಾರಿಗೆ ಯಾವ ಖಾತೆ ನೀಡಬೇಕು ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

 ಸಂಜೆ 4:30ಕ್ಕೆ ಏಕನಾಥ್ಶಿಂಧೆ ಮತ್ತು ದೇವೇಂದ್ರ ಫಡ್ನವೀಸ್ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚಿಸಲು ಹಕ್ಕುದಾರಿಕೆ ಮಂಡಿಸಿ ಜಂಟಿ ಸುದ್ದಿಗೋಷ್ಠಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments