ವಿಶ್ವಾಸ ಪರೀಕ್ಷೆ ಗೆದ್ದ ಏಕನಾಥ್‌ ಶಿಂಧೆ!

Webdunia
ಸೋಮವಾರ, 4 ಜುಲೈ 2022 (14:01 IST)
ಮುಂಬೈ : ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟ ಕೊನೆಗೂ ಅಂತ್ಯವಾಗಿದೆ. ಸಿಎಂ ಏಕನಾಥ್ ಶಿಂಧೆ ಬಹುಮತ ಪರೀಕ್ಷೆಯಲ್ಲಿ ಪಾಸ್ ಆಗಿದ್ದಾರೆ.
 
ಒಟ್ಟು ಬಿಜೆಪಿ ಮತ್ತು ಶಿವಸೇನೆ ಬಣದ ಒಟ್ಟು 164 ಶಾಸಕರು ಶಿಂಧೆ ಪರ ನಿಂತರೇ, 99 ಶಾಸಕರು ವಿರುದ್ಧವಾಗಿ ನಿಂತಿದ್ದಾರೆ. ಈ ಮೂಲಕ ಬಿಜೆಪಿ ಬೆಂಬಲಿತ ಶಿವಸೇನೆ ಬಂಡಾಯ ಸರ್ಕಾರ ಎರಡೂವರೆ ವರ್ಷದ ಬಳಿಕ ಅಧಿಕಾರ ಹಿಡಿದಿದೆ. 

ಎರಡು ದಿನಗಳ ಕಾಲ ಕರೆಯಲಾಗಿದ್ದ ವಿಶೇಷ ಅಧಿವೇಶನದಲ್ಲಿ, ಭಾನುವಾರದಂದು ಸ್ಪೀಕರ್ ಆಯ್ಕೆ ಮಾಡಲಾಗಿತ್ತು. ಬಿಜೆಪಿ ಶಾಸಕ ರಾಹುಲ್ ನಾರ್ವೇಕರ್ ಬಂಡಾಯ ಶಾಸಕರ ನೆರವಿನೊಂದಿಗೆ 164 ಮತಗಳನ್ನು ಗಳಿಸುವ ಮೂಲಕ ಸ್ಪೀಕರ್ ಆಗಿ ಆಯ್ಕೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಇಂದು ಶಿಂಧೆ ಬಹುಮತ ಸಾಬೀತಿಗೆ ಮತಗಳ ಕೊರತೆಯಾಗಲಿಲ್ಲ. 

288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಹುಮತಕ್ಕೆ 145 ಮತಗಳ ಅವಶ್ಯಕತೆ ಇದ್ದು, ಓರ್ವ ಶಾಸಕನ ನಿಧನದಿಂದ ಇದು 144ಕ್ಕೆ ಇಳಿದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments