Webdunia - Bharat's app for daily news and videos

Install App

ಮೋದಿ ಮನೆ ನಾಯಿಯಂತೆ ವರ್ತಿಸುತ್ತಿರುವ ಚುನಾವಣಾ ಆಯೋಗ: ನಾಲಗೆ ಹರಿಬಿಟ್ಟ ಕಾಂಗ್ರೆಸ್‌ ಶಾಸಕ

Sampriya
ಶನಿವಾರ, 30 ನವೆಂಬರ್ 2024 (14:55 IST)
Photo Courtesy X
ಮುಂಬೈ: ಮಹಾರಾಷ್ಟ್ರ ಕಾಂಗ್ರೆಸ್ ವಿಧಾನಪರಿಷತ್‌ ಸದಸ್ಯ ಅಶೋಕ್‌ ಎ. ಜಗತಾಪ್‌ ಅಲಿಯಾಸ್‌ ಭಾಯ್ ಜಗತಾಪ್ ಚುನಾವಣಾ ಆಯೋಗದ ವಿರುದ್ಧ ನಾಲಗೆ ಹರಿಬಿಟ್ಟು, ವಿವಾದಕ್ಕೆ ಗುರಿಯಾಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮನೆಯ ಹೊರಗಿನ ನಾಯಿಯಂತೆ ಚುನಾವಣಾ ಆಯೋಗ ವರ್ತಿಸುತ್ತಿದೆ ಎಂದು ಜಗತಾಪ್ ನಾಲಿಗೆ ಹರಿಬಿಟ್ಟಿದ್ದಾರೆ. ಮಾತ್ರವಲ್ಲ, ತನ್ನ ಹೇಳಿಕೆಗೆ ನಾನು ಸ್ವಲ್ಪವೂ ಕ್ಷಮೆಯಾಚಿಸಲ್ಲ. ಆಯೋಗವು ಮೋದಿ ಮತ್ತು ಇತರ ಮಂತ್ರಿಗಳ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದರೆ ನಾನು ಹೇಳಿದ್ದು ಸರಿ ಎಂದಿದ್ದಾರೆ.

ಚುನಾವಣಾ ಆಯೋಗ ಇರೋದು ಪ್ರಜಾಪ್ರಭುತ್ವ ಬಲಪಡಿಸಲು, ದುರದೃಷ್ಟವಶಾತ್ ಅವುಗಳನ್ನು ದುರುಪಯೋಗ ಪಡಿಸಿಕೊಳ್ಳುವಂತಹ ಕೆಲಸ ಮಹಾರಾಷ್ಟ್ರದಲ್ಲಿ ಮಾತ್ರವಲ್ಲದೇ ಇಡೀ ದೇಶದಲ್ಲಿ ನಡೆಯುತ್ತಿವೆ. ಮಹಾರಾಷ್ಟ್ರದಲ್ಲಿ ರಾಜ್ಯದ ಜನರು ಮಹಾಯುತಿ ಆಡಳಿತವನ್ನು ಸಂಪೂರ್ಣವಾಗಿ ವಿರೋಧಿಸಿದ್ದರು. ಆದ್ರೂ ಜಯ ಸಿಕ್ಕಿದೆ ಅಂದ್ರೆ, ಇದರ ಸಂಪೂರ್ಣ ಕ್ರೆಡಿಟ್ ಇವಿಎಂಗಳಿಗೆ ಸಲ್ಲುತ್ತದೆ. ಇಲ್ಲಿ ಇವಿಎಂಗಳನ್ನು ತಿರುಚಲಾಗಿದೆ, ಕೆಲವು ಸ್ಥಳಗಳಲ್ಲಿ ಹ್ಯಾಕ್ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲಾ ಪ್ರತಿಕ್ರಿಯಿಸಿ, ಸಾಂವಿಧಾನಿಕ ಸಂಸ್ಥೆಯನ್ನು ಅವಮಾನಿಸುವುದು, ಕಾಂಗ್ರೆಸ್‌ಗೆ ಅಭ್ಯಾಸವಾಗಿಬಿಟ್ಟಿದೆ. ಈಗ ಅವರು ಚುನಾವಣಾ ಆಯೋಗವನ್ನ ಅನುಮಾನಿಸುತ್ತಿದ್ದಾರೆ. ಜಾರ್ಖಂಡ್, ಜಮ್ಮು-ಕಾಶ್ಮೀರ, ವಯನಾಡ್, ಕರ್ನಾಟಕ ಮತ್ತು ತೆಲಂಗಾಣದಲ್ಲಿ ಚುನಾವಣೆ ನಡೆದಾಗ ಚುನಾವಣಾ ಆಯೋಗ ಚೆನ್ನಾಗಿತ್ತು. ಹರಿಯಾಣ ಮತ್ತು ಮಹಾರಾಷ್ಟ್ರದಲ್ಲಿ ಮಾತ್ರ ಚೆನ್ನಾಗಿಲ್ಲ ಎಂದು ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮೆರಿಕಾ ಅಧ್ಯಕ್ಷ ಟ್ರಂಪ್ ಆಪ್ತ ಚಾರ್ಲಿ ಕಿರ್ಕ್‌ ಗುಂಡೇಟಿಗೆ ಬಲಿ, Viral Video

ನೇಪಾಳ ಹಿಂಸಚಾರ: ಏರುತ್ತಲೇ ಇದೆ ಮೃತರ ಸಂಖ್ಯೆ

ಕೇರಳದಲ್ಲಿ ಭಯ ಹುಟ್ಟಿಸಿದ ವಿರಳ ಮಿದುಳು ಸೋಂಕಿಗೆ ಮತ್ತೊಂದು ಬಲಿ

ದೇಶದ ಮೇಲೆ ಹಿಂದೂಗಳಷ್ಟೇ ಮುಸ್ಲಿಮರಿಗೂ ಹಕ್ಕಿದೆ ಎಂದ ಸಂತೋಷ್ ಲಾಡ್: ಕಿಚಾಯಿಸಿದ ಆರ್ ಅಶೋಕ್

ಬೆಂಗಳೂರು 10 ನೇ ತರಗತಿ ವಿದ್ಯಾರ್ಥಿನಿಯನ್ನು ವಿವಸ್ತ್ರವಾಗಿಸಿ ಹಲ್ಲೆ

ಮುಂದಿನ ಸುದ್ದಿ
Show comments