Webdunia - Bharat's app for daily news and videos

Install App

ಮೋದಿ ದ್ವೇಷ ಭಾಷಣ ವಿರುದ್ಧ ಜೆ ಪಿ ನಡ್ಡಾಗೆ ಚುನಾವಣಾ ಆಯೋಗ ನೋಟಿಸ್ ಜಾರಿ

Sampriya
ಗುರುವಾರ, 25 ಏಪ್ರಿಲ್ 2024 (16:21 IST)
ನವದೆಹಲಿ: ಪ್ರಧಾನಿ ಮೋದಿ ಅವರು ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದಡಿಯಲ್ಲಿ ನೀಡಿದ ದೂರಿನ ಅನ್ವಯ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಚುನಾವಣಾ ಆಯೋಗವು ನೋಟಿಸ್‌ ಜಾರಿ ಮಾಡಿದೆ.

ಚುನಾವಣಾ ಭಾಷಣದ ವೇಳೆ ಜನರ ಸಂಪತ್ತನ್ನು ಮುಸ್ಲಿಮರಿಗೆ ಹಂಚಿಕೆ ಮಾಡಬೇಕು ಎಂದು ಕಾಂಗ್ರೆಸ್ ಬಯಸಿದೆ. ಮಹಿಳೆಯರ ಮಂಗಳಸೂತ್ರವನ್ನೂ ಕಾಂಗ್ರೆಸ್‌ ಬಿಡುವುದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದರು. ಇವರ ಹೇಳಿಕೆಗೆ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದರು. ಅದಲ್ಲದೆ ಅವರ ಹೇಳಿಕೆ ವಿರೋಧಿಸಿ ದೂರುಗಳು ದಾಖಲಾಗಿದ್ದವು.

ಯಾವುದೇ ಪ್ರಧಾನಿಯ ವಿರುದ್ಧ ಸಲ್ಲಿಸಲಾದ ದೂರನ್ನು ಚುನಾವಣಾ ಆಯೋಗವು ಪರಿಗಣಿಸಿರುವುದು ಇದೇ ಮೊದಲು ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದರ ಜೊತೆಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೂ ಚುನಾವಣಾ ಆಯೋಗ ನೋಟಿಸ್‌ ನೀಡಿದ್ದು, ತಾವು ಹಾಗೂ ರಾಹುಲ್ ಗಾಂಧಿ ನೀಡಿರುವ ಹೇಳಿಕೆ ಬಗ್ಗೆ ಸ್ಪಷ್ಟನೆ ಕೇಳಿದೆ.

ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್‌, ಸಿಪಿಐ, ಸಿಪಿಐ(ಎಂಎಲ್) ಹಾಗೂ ನಾಗರಿಕ ಸೇವಾ ಸಂಸ್ಥೆಗಳು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದವು.

ಈ ಬಗ್ಗೆ ಸೋಮವಾರದೊಳಗೆ ಸ್ಪಷ್ಟನೆ ನೀಡಬೇಕು ಎಂದು ನಡ್ಡಾ ಅವರಿಗೆ ನೀಡಿದ ನೋಟಿಸ್‌ನಲ್ಲಿ ಸೂಚಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments