Select Your Language

Notifications

webdunia
webdunia
webdunia
webdunia

ಯಾರೇರುತ್ತಾರೆ ಸೈಕಲ್ ?

ಯಾರೇರುತ್ತಾರೆ ಸೈಕಲ್ ?
ನವದೆಹಲಿ , ಶುಕ್ರವಾರ, 13 ಜನವರಿ 2017 (08:30 IST)
ಉತ್ತರ ಪ್ರದೇಶದಲ್ಲಿ ಮುಲಾಯಂ ಸಿಂಗ್ ಯಾದವ್ ಅವರ ಕೌಟುಂಬಿಕ  ಕಲಹ ಪಕ್ಷವನ್ನೇ ಒಡೆಯಲು ಕಾರಣವಾಗಿದೆ. ಮತ್ತೀಗ ಎರಡು ಬಣದವರು ಪಕ್ಷದ ಚಿಹ್ನೆ 'ಸೈಕಲ್'ನ್ನು ತಮ್ಮದಾಗಿಸಿಕೊಳ್ಳಲು ಕಸರತ್ತು ನಡೆಸುತ್ತಿದ್ದು ಈ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ಚುನಾವಣಾ ಆಯೋಗದ ಮೆಟ್ಟಿಲೇರಿದ್ದಾರೆ.

ಈ ಕುರಿತು ಚುನಾವಣಾ ಆಯೋಗ ಇಂದು ವಿಚಾರಣೆ ನಡೆಸಿದ್ದು, ಎರಡು ಕಡೆಯವರ ವಾದ ಪ್ರತಿವಾದ ಆಲಿಸಿ, ದಾಖಲೆಗಳನ್ನು ಪರಿಶೀಲಿಸಿ ಚಿಹ್ನೆ ಯಾರಿಗೆ ಸೇರಬೇಕು ಎಂಬ ನಿರ್ಧಾರವನ್ನು ಕೈಗೊಳ್ಳಲಿದೆ. 
 
ಇಂದು ಮಧ್ಯಾಹ್ನ 12.30ಕ್ಕೆ ದೆಹಲಿಯಲ್ಲಿ ಚುನಾವಣಾ ಆಯೋಗ ಸಭೆ ನಡೆಸಲಿದ್ದು , ಸಭೆಯಲ್ಲಿ ಮುಲಾಯಂ ಸಿಂಗ್ ಯಾದವ್ ಮತ್ತು ಅವರ ಪುತ್ರ ಉತ್ತರ ಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಪಾಲ್ಗೊಳ್ಳಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ರಾಹುಲ್ ಜತೆ ಸಿಧು ಸಮಾಲೋಚನೆ