ಜಗನ್ ಕ್ಷೇತ್ರದಲ್ಲಿ ರಂಗೇರಿದ ಚುನಾವಣೆ

Webdunia
ಶನಿವಾರ, 6 ಆಗಸ್ಟ್ 2022 (13:49 IST)
ಹೈದರಾಬಾದ್ : ಆಂಧ್ರಪ್ರದೇಶ ಚುನಾವಣೆಗೆ ಇನ್ನೂ ಎರಡು ವರ್ಷಗಳು ಬಾಕಿ ಇರುವಾಗಲೇ ಅಖಾಡ ಸಿದ್ಧವಾಗುತ್ತಿದೆ.
 
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಕ್ಷೇತ್ರದಿಂದಲೇ ಸ್ಪರ್ಧೆ ಮಾಡುವುದಾಗಿ ಹಾಲಿ ಸಿಎಂ ವೈ.ಎಸ್ ಜಗನ್ ಮೋಹನ್ ರೆಡ್ಡಿ ಘೋಷಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ರಾಜಶೇಖರ ರೆಡ್ಡಿ ಕಾಂಗ್ರೆಸ್ ನಾಯಕರ ಜೊತೆಗೆ ನಡೆಸಿದ ಸಭೆ ಬಳಿಕ ಜಗನ್ ಮೋಹನ್ ರೆಡ್ಡಿ ಈ ಘೋಷಣೆ ಮಾಡಿದ್ದಾರೆ. ಮುಂಬರುವ ಚುನಾವಣಾ ಕದನವು ಚಂದ್ರಬಾಬು ನಾಯ್ಡು ಕ್ಷೇತ್ರ ಕುಪ್ಪಂನಿಂದಲೇ ಆರಂಭವಾಗುತ್ತದೆ. ನಾಯ್ಡು ಅವರನ್ನು ಸಂಪೂರ್ಣವಾಗಿ ಹೊರ ಹಾಕುವುದು ನಮ್ಮ ಗುರಿ. ಇದಕ್ಕಾಗಿ ಕಾರ್ಯಕರ್ತರು ಸಿದ್ಧವಾಗಬೇಕು ಎಂದು ಜಗನ್ ಕರೆ ಕೊಟ್ಟಿದ್ದಾರೆ.

1989 ರಿಂದ ಚಿತ್ತೂರು ಜಿಲ್ಲೆಯ ಕುಪ್ಪಂನಿಂದ ಚಂದ್ರಬಾಬು ನಾಯ್ಡು ಪ್ರತಿನಿಧಿಸುತ್ತಿದ್ದಾರೆ. 2019 ರ ಚುನಾವಣೆಯಲ್ಲಿ ವೈಎಸ್ಆರ್ಸಿಪಿ 151 ಸ್ಥಾನಗಳನ್ನು ಗಳಿಸಿ, ಟಿಡಿಪಿಯನ್ನು 23 ಕ್ಕೆ ಇಳಿಸಿತು. ನಾಯ್ಡು ಅವರ ಮತಗಳು ಇಲ್ಲಿ ಮೊದಲ ಬಾರಿಗೆ ಶೇ.60 ಕ್ಕಿಂತ ಕಡಿಮೆ ಅಂದರೆ ಶೇ.55.18 ಕ್ಕೆ ಕುಸಿದಿತ್ತು.

ವೈಎಸ್ಆರ್ಸಿಪಿಯ ಅಭ್ಯರ್ಥಿ ಕೆ ಚಂದ್ರಮೌಳಿ ಶೇ.38 ರಷ್ಟು ಮತಗಳನ್ನು ಪಡೆದಿದ್ದರು. ಜನಸೇನೆ ಮತ್ತು ಬಿಜೆಪಿಯಿಂದ ನಾಯ್ಡು ಮತಗಳು ಕಡಿಮೆಯಾಗಿದ್ದು ಈ ಕ್ಷೇತ್ರದಲ್ಲಿ ಎರಡನೇ ಸ್ಥಾನದಲ್ಲಿ ವೈಎಸ್ಆರ್ಸಿಪಿಯಿಂದ ತಾವು ಸ್ಪರ್ಧಿಸುವ ಮೂಲಕ ನಾಯ್ಡುಗೆ ಸೋಲಿನ ರುಚಿ ಕಾಣಿಸಲು ಜಗನ್ ನಿರ್ಧರಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾಗೆ 14 ದಿನ ನ್ಯಾಯಾಂಗ ಬಂಧನ

ದಾವಣಗೆರೆಯಲ್ಲಿ ಬಿಜೆಪಿ ಗೆಲುವಿಗೆ ಪಣ ತೊಟ್ಟು ಹೋರಾಡುತ್ತೇವೆ: ವಿಜಯೇಂದ್ರ

ದುಬೈನಲ್ಲಿ ಸಿಲುಕಿದ್ದ ಕನ್ನಡಿಗರು ಬೆಂಗಳೂರಿಗೆ ವಾಪಸ್‌: ಶಾಸಕ ನಾಗೇಂದ್ರ ಕಾರ್ಯಕ್ಕೆ ಮೆಚ್ಚುಗೆ

ಬಿಹಾರ ರಾಜಕೀಯದಲ್ಲಿ ಅಚ್ಚರಿಯ ಬೆಳವಣಿಗೆ: ರಾಷ್ಟ್ರ ರಾಜಕಾರಣದತ್ತ ಮುಖ್ಯಮಂತ್ರಿ ನಿತೀಶ್‌ಕುಮಾರ್

ಯುದ್ಧದಿಂದ ತೈಲ ಸಂಕಷ್ಟಕ್ಕೀಡಾದ ಭಾರತಕ್ಕೆ ಮತ್ತೆ ರಷ್ಯಾವೇ ಆಪತ್ಬಾಂಧವ

ಮುಂದಿನ ಸುದ್ದಿ
Show comments