ಚುನಾವಣೆ : ಇಂದು ಮಮತಾ ಬ್ಯಾನರ್ಜಿ ಸಭೆ

Webdunia
ಬುಧವಾರ, 15 ಜೂನ್ 2022 (07:11 IST)
ನವದೆಹಲಿ : ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಅಖಾಡ ಸಿದ್ಧವಾಗುತ್ತಿದ್ದು, ಬಿಜೆಪಿ ವಿರುದ್ಧ ಸ್ಪರ್ಧಿಸಲು ಅಭ್ಯರ್ಥಿ ಯಾರಾಗಬೇಕು ಎನ್ನುವ ಚರ್ಚೆಗಳು ಶುರುವಾಗಿವೆ.
 
ಈ ಬಗ್ಗೆ ಚರ್ಚೆ ನಡೆಸಲು ಬಿಜೆಪಿಯೇತರ ಪಕ್ಷಗಳ ನಾಯಕರು ದೆಹಲಿಯಲ್ಲಿ ಇಂದು ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಸಭೆ ನಡೆಯಲಿದೆ.

ಸೋನಿಯಾ ಗಾಂಧಿ, ಶರದ್ ಪವಾರ್, ಅಖಿಲೇಶ್ ಯಾದವ್, ಅರವಿಂದ್ ಕೇಜ್ರಿವಾಲ್, ಸೀತಾರಾಂ ಯೆಚೂರಿ ಸೇರಿದಂತೆ ದೇಶದ 22 ಪ್ರಾದೇಶಿಕ ಪಕ್ಷಗಳಿಗೆ ಪತ್ರ ಬರೆದು ಇಂದಿನ ಸಭೆಯಲ್ಲಿ ಭಾಗಿಯಾಗಲು ಮಮತಾ ಮನವಿ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್, ಎನ್ಸಿಪಿ, ಎಸ್ಪಿ, ಆರ್ಜೆಡಿ, ಎನ್ಸಿ, ಎಎಪಿ, ಸಿಪಿಎಂ, ಸಿಪಿಐ, ಜೆಎಂಎಂ, ಶಿವಸೇನೆ, ಐಯುಎಂಎಲ್, ಪಿಡಿಪಿ, ಜೆಡಿಎಸ್, ಆರ್ಎಲ್ಡಿ ಸೇರಿದಂತೆ ನವೀನ್ ಪಟ್ನಾಯಕ್ ಅವರ ಬಿಜು ಜನತಾ ದಳ (ಬಿಜೆಡಿ) ಜೊತೆಗೆ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) ಸಭೆಯಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಮಮತಾ ಬ್ಯಾನರ್ಜಿ ಕರೆದಿರುವ ಈ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಜೈರಾಮ್ ರಮೇಶ್ ಮತ್ತು ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಕಾಂಗ್ರೆಸ್ ಪ್ರತಿನಿಧಿಸಲಿದ್ದು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಬದಲು ಮಾಜಿ ಮುಖ್ಯಮಂತ್ರಿ ಹೆಚ್ಡಿಕೆ ಭಾಗಿ ಆಗುವ ಸಾಧ್ಯತೆಯಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments