ಚುನಾವಣೆ ಕಾರ್ಯತಂತ್ರ ಸಭೆ?

Webdunia
ಭಾನುವಾರ, 12 ಜೂನ್ 2022 (12:51 IST)
ಕೋಲ್ಕತಾ : ಮುಂಬರುವ ರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದಂತೆ ಜಂಟಿ ಕಾರ್ಯತಂತ್ರವನ್ನು ಸಿದ್ಧಪಡಿಸಲು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜೂ.15ರಂದು ವಿಪಕ್ಷ ನಾಯಕರ ಸಭೆ ಕರೆದಿದ್ದಾರೆ.
 
ಈ ಸಂಬಂಧ ಪ್ರತಿಪಕ್ಷಗಳ ನಾಯಕರಿಗೆ ಪತ್ರ ಬರೆದಿರುವ ಅವರು, ದಿಲ್ಲಿಯಲ್ಲಿ ನಡೆಯಲಿರುವ ಸಭೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕೋರಿದ್ದಾರೆ.

‘ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಎಲ್ಲ ಪ್ರಗತಿಪರ ವಿಪಕ್ಷ ನಾಯಕರು ರಾಷ್ಟ್ರಪತಿ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲು ಕಾನ್ಸ್ಟಿಟ್ಯುಶನ್ ಕ್ಲಬ್ನಲ್ಲಿ ಜೂ. 15 ರಂದು ಮಧ್ಯಾಹ್ನ 3 ಗಂಟೆಗೆ ಸಭೆ ಸೇರಬೇಕಾಗಿ ಕೋರಲಾಗಿದೆ’ ಎಂದು ತೃಣಮೂಲ ಕಾಂಗ್ರೆಸ್ ತಿಳಿಸಿದೆ.

ಇದಕ್ಕೆ ತಕ್ಕುದಾಗಿ, ಸಿಪಿಎಂ ನಾಯಕ ಸೀತಾರಾಂ ಯೆಚೂರಿ ಅವರು, ‘ಮಮತಾರ ಪ್ರತ್ಯೇಕ ಸಭೆ ವಿಪಕ್ಷಗಳಲ್ಲಿ ಒಡಕು ಮೂಡಿಸುತ್ತದೆ’ ಎಂದು ಆಕ್ಷೇಪಿಸಿದ್ದಾರೆ.

ರಾಷ್ಟ್ರಪತಿ ಚುನಾವಣೆಯು ಜು.18 ರಂದು ನಡೆಯಲಿದ್ದು, ಶಾಸಕರು ಹಾಗೂ ಸಂಸದರು ಸೇರಿದಂತೆ 4,809 ಸದಸ್ಯರನ್ನೊಳಗೊಂಡ ಜನಪ್ರತಿನಿಧಿಗಳ ಸಮೂಹವು ರಾಷ್ಟ್ರಪತಿಯವರನ್ನು ಚುನಾಯಿಸಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments