Webdunia - Bharat's app for daily news and videos

Install App

ವಿದ್ಯುತ್‌ ಕಳ್ಳತನ: ಎಸ್ಪಿ ಸಂಸದನಿಗೆ ಬರೋಬ್ಬರಿ ₹ 1.91 ಕೋಟಿ ದಂಡ, ಮನೆಗೆ ಕರೆಂಟ್‌ ಕಟ್‌

Sampriya
ಶುಕ್ರವಾರ, 20 ಡಿಸೆಂಬರ್ 2024 (15:53 IST)
Photo Courtesy X
ಉತ್ತರ ಪ್ರದೇಶ: ವಿದ್ಯುತ್ ಕಳವು ಮಾಡಿದ ಆರೋಪದ ಹಿನ್ನಡೆಯಲ್ಲಿ ಉತ್ತರ ಪ್ರದೇಶದ ಸಂಭಾಲ್ ಕ್ಷೇತ್ರದ ಸಂಸದ ಜಿಯಾವುರ್ ರೆಹಮಾನ್ ಬಾರ್ಕ್  ಅವರಿಗೆ ಅಲ್ಲಿನ ಇಂಧನ ಇಲಾಖೆಯು ₹ 1.91 ಕೋಟಿ ರೂ ದಂಡ ವಿಧಿಸಿದೆ. ಜೊತೆಗೆ ಅವರ ಮನೆಗೆ ವಿದ್ಯುತ್ ಸ್ಥಗಿತಗೊಳಿಸಿದೆ.

ಸಂಭಾಲ್ ದೀಪಾ ಸರಾಯ್ನಲ್ಲಿರುವ ಜಿಯಾವುರ್ ರೆಹಮಾನ್ ಬಾರ್ಕ್ ಅವರು ತಮ ಮನೆಗೆ ಅಕ್ರಮ ಸಂಕರ್ಪ ಪಡೆದ ಹಿನ್ನಲೆಯಲ್ಲಿ ವಿದ್ಯುತ್ ಕಳ್ಳತನದ ಆರೋಪದ ಮೇಲೆ ಉತ್ತರ ಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಜಿಯಾವುರ್ ರೆಹಮಾನ್ ವಿರುದ್ಧ ವಿದ್ಯುತ್ ಕಾಯ್ದೆ, 2003, (ವಿದ್ಯುತ್ ಕಳ್ಳತನ ಅಥವಾ ಅನಧಿಕೃತ ವಿದ್ಯುತ್ ಬಳಕೆ) ಸೆಕ್ಷನ್ 135 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ವಿದ್ಯುತ್ ಪರೀಕ್ಷಾ ಪ್ರಯೋಗಾಲಯದಿಂದ ಪಡೆದ ಗ್ರಾಹಕರ ಮೀಟರ್ ಪರಿಶೀಲಿಸಿದಾಗ ಮೀಟರ್ ಬೈಪಾಸ್ ಮಾಡಿ ಅಕ್ರಮವಾಗಿ ವಿದ್ಯುತ್ ಬಳಕೆ ಮಾಡಿ ವಿದ್ಯುತ್ ಕಳ್ಳತನ ಮಾಡಿರುವುದು ಸ್ಪಷ್ಟವಾಗಿದೆ ಎಂದು ಇಂಧನ ಇಲಾಖೆ ಅಧಿಕಾರಿಯೊಬ್ಬರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿತ್ತು.

ಭಾರೀ ಭದ್ರತೆಯ ನಡುವೆ ಸಂಸದರ ನಿವಾಸವನ್ನು ಇಲಾಖೆ ಪರಿಶೀಲನೆ ಕೂಡ ನಡೆಸಿತ್ತು. ಇದೇ ಪ್ರಕರಣದಲ್ಲಿ ನಿವಾಸದಲ್ಲಿ ತಪಾಸಣೆ ನಡೆಸುತ್ತಿದ್ದಾಗ ಅಧಿಕಾರಿಗಳಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಅವರ ತಂದೆ ಮಾಮ್ಲುಕೂರ್ ರೆಹಮಾನ್ ಬಾರ್ಕ್ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪರಿಶೀಲನೆಯ ಸಮಯದಲ್ಲಿ, ಎಂಜಿನಿಯರ್‌ಗಳಾದ ಅಜಯ್ ಶರ್ಮಾ ಮತ್ತು ವಿ.ಕೆ. ಗಂಗಲ್ ಅವರು ಸಂಸದರ ತಂದೆಯಿಂದ ತಮಗೆ ಬೆದರಿಕೆ ಇದೆ ಎಂದು ಹೇಳಿಕೊಂಡಿದ್ದಾರೆ. ಈ ಸಂಬಂಧ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ಅವರು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಸ್ಥಿತಿ ನಿಜಕ್ಕೂ ಶಾಕಿಂಗ್

ಒಳ ಮೀಸಲಾತಿಯಲ್ಲಿ ಮೋಸ, ವಂಚನೆ ಸಹಿಸುವುದಿಲ್ಲ: ಛಲವಾದಿ ನಾರಾಯಣಸ್ವಾಮಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಹಬ್ಬಕ್ಕೂ ಬರದ ಗೃಹಲಕ್ಷ್ಮಿ ಹಣ: ಸರ್ಕಾರ ರೊಕ್ಕ ಕೊಡೋದು ಯಾವಾಗ್ಲೋ ಅಂತಿದ್ದಾರೆ ಮಹಿಳೆಯರು

ಡಾ ದೇವಿಪ್ರಸಾದ್ ಶೆಟ್ಟಿಯವರ ಪ್ರಕಾರ ಕೀಲುನೋವಿಗೆ ಬೆಸ್ಟ್ ಔಷಧಿ ಇದುವೇ

ಮುಂದಿನ ಸುದ್ದಿ
Show comments