Select Your Language

Notifications

webdunia
webdunia
webdunia
webdunia

ಎಐಸಿಸಿ ಕಚೇರಿಯಲ್ಲಿ ಸೋನಿಯಾ ನೇತೃತ್ವದಲ್ಲಿ ತುರ್ತುಸಭೆ

ಎಐಸಿಸಿ ಕಚೇರಿಯಲ್ಲಿ ಸೋನಿಯಾ ನೇತೃತ್ವದಲ್ಲಿ ತುರ್ತುಸಭೆ
ನವದೆಹಲಿ , ಮಂಗಳವಾರ, 8 ಆಗಸ್ಟ್ 2017 (18:50 IST)
ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ನೇತೃತ್ವದಲ್ಲಿ ತುರ್ತುಸಭೆ ಕರೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.
ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಭಾಗಿಯಾಗಿದ್ದಾರೆ. ಅನಾರೋಗ್ಯದಿಂದಾಗಿ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಸಭೆಗೆ ಗೈರುಹಾಜರಾಗಿದ್ದಾರೆ.
 
ಗುಜರಾತ್ ರಾಜ್ಯಸಭೆ ಚುನಾವಣೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಕ್ಕೆ ಪ್ರತಿಷ್ಠೆಯ ಕಣವಾಗಿ ಪರಿಣಮಿಸಿದೆ. ಗುಜರಾತ್ ರಾಜ್ಯಸಭೆ ಚುನಾವಣೆಯಲ್ಲಿ ಇಬ್ಬರು ಶಾಸಕರು ಬಿಜೆಪಿ ಏಜೆಂಟ್‌ರಿಗೆ ತೋರಿಸಿ ಮತದಾನ ಮಾಡಿದ್ದರಿಂದ ಅವರ ಮತಗಳನ್ನು ರದ್ದುಗೊಳಿಸುವಂತೆ ಕಾಂಗ್ರೆಸ್ ಚುನಾವಣೆ ಆಯೋಗದ ಮೆಟ್ಟಿಲೇರಿದೆ.
 
ಮತದಾನದ ವಿಡಿಯೋವನ್ನು ಗುಜರಾತ್ ಚುನಾವಣೆ ಆಯೋಗದ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದು, ಕೇಂದ್ರ ಚುನಾವಣೆ ಆಯೋಗಕ್ಕೆ ವರದಿ ನೀಡಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಕಂತೆ ಕಂತೆ ನೋಟುಗಳ ಮೇಲೆ ವರ ಮಹಾಲಕ್ಷ್ಮೀ ಪೂಜೆ