Webdunia - Bharat's app for daily news and videos

Install App

EOS-02 ಯಶಸ್ವಿಯಾಗಿ ಉಡಾವಣೆ : ಎಸ್ಎಸ್ಎಲ್ವಿ-ಡಿ1 ವಿಶೇಷತೆ ಏನು?

Webdunia
ಭಾನುವಾರ, 7 ಆಗಸ್ಟ್ 2022 (13:22 IST)
ಶ್ರೀಹರಿಕೋಟಾ : ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಭಾರತೀಯ ಬಾಹ್ಯಾಕಾಶ ಹಾಗೂ ಸಂಶೋಧನಾ ಸಂಸ್ಥೆ (ಇಸ್ರೋ) ಭೂಮಿಯ ವೀಕ್ಷಣಾ ಉಪಗ್ರಹ EOS-02  ಅನ್ನು SSLV-D1 ಉಡಾವಣಾ ವಾಹಕ ಮೂಲಕ ಉಡಾಯಿಸಿದೆ.

ಇಒಎಸ್-1 ಎರಡು ಉಪಗ್ರಹಗಳನ್ನು ಹೊತ್ತು ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದ ಮೊದಲ ಉಡಾವಣಾ ಪ್ಯಾಡ್ನಿಂದ ಇಂದು ಬೆಳಗ್ಗೆ 9:18ರ ಸುಮಾರಿಗೆ ಯಶಸ್ವಿಯಾಗಿ ಉಡಾವಣೆಗೊಂಡಿದೆ.

ಇದರ ಜೊತೆ ಭಾರತ 75ನೇ ಅಮೃತ ಮಹೋತ್ಸವ ಆಚರಿಸುತ್ತಿರುವ ನೆನಪಿನಾರ್ಥವಾಗಿ ಗ್ರಾಮೀಣ ಭಾಗದ 75 ಸರ್ಕಾರಿ ಶಾಲೆಗಳ 750 ವಿದ್ಯಾರ್ಥಿನಿಯರು ಸೇರಿ ತಯಾರಿಸಿರುವ 8 ಕೆಜಿ ತೂಕದ `ಆಜಾದಿ ಸ್ಯಾಟ್’ ಉಪಗ್ರಹವನ್ನು ಕಕ್ಷೆಗೆ ಕೊಂಡೊಯ್ದಿದೆ.  ಕಳೆದ 7 ದಿನಗಳಿಂದ ಇಸ್ರೋ ಉಪಗ್ರಹ ಉಡಾವಣೆಗೆ ಸಿದ್ಧತೆ ನಡೆಸುತ್ತಿತ್ತು. ಇಂದು ಬೆಳಗ್ಗೆ 9:18ರ ಸುಮಾರಿಗೆ ಉಡಾವಣೆಗೊಂಡಿದೆ.

ಈ ಉಪಗ್ರಹಗಳಿಂದ ರಾಕೆಟ್ ನಿರ್ಮಿಸಲು ಸಹಾಯ ಮಾಡುವ ಹೊಸ ವೈಶಿಷ್ಟ್ಯಗಳಿಂದ ನಿರ್ಮಿಸಲಾಗಿದ್ದು, ಮಾಡ್ಯುಲರ್ ಸಿಸ್ಟಮ್, ಪೈರೋ ಸರ್ಕ್ಯೂಟ್, ಮಲ್ಟಿ ಸ್ಯಾಟಲೈಟ್ ಅಡಾಪ್ಟರ್ ಡೆಕ್, ಕಮರ್ಷಿಯಲ್ ಆಫ್ ದಿ ಶೆಲ್ಫ್ ಘಟಕಗಳೊಂದಿಗೆ ಮಿನಿಯೇಚರ್ ಕಡಿಮೆ ವೆಚ್ಚದ ಏವಿಯಾನಿಕ್ಸ್, ಇಂಟರ್ಫೇಸ್ನೊಂದಿಗೆ ವೇಗವಾಗಿ ಚೆಕ್ ಔಟ್ ವ್ಯವಸ್ಥೆಯನ್ನು ಹೊಂದಿರುವ ಬೋರ್ಡ್ ಕಂಪ್ಯೂಟರ್ಗಳು ಇರಲಿದೆ. ಉಡಾವಣೆಗೊಂಡ ಸುಮಾರು 13.2 ನಿಮಿಷಗಳ ಬಳಿಕ ಉಪಗ್ರಹಗಳನ್ನು ಈ ರಾಕೆಟ್ ಕಕ್ಷೆಗೆ ತಲುಪಿಸಿದೆ. 

ಇಸ್ರೋದ ವರ್ಕ್ಹಾರ್ಸ್ ಎಂದೇ ಖ್ಯಾತಿ ಪಡೆದಿರುವ ಪಿಎಸ್ಎಲ್ವಿಗಿಂತ ಬರೋಬ್ಬರಿ 10 ಮೀ. ಚಿಕ್ಕದಾಗಿರುವ ಎಸ್ಎಸ್ಎಲ್ವಿ-ಡಿ1 ಕೇವಲ 34 ಮೀ. ಉದ್ದ ಹಾಗೂ 2 ಮೀ. ವ್ಯಾಸವನ್ನು ಹೊಂದಿದೆ. ಈ ರಾಕೆಟ್ ಒಟ್ಟು 120 ಟನ್ ತೂಕವಿದ್ದು, ಸುಮಾರು 500 ಕೆಜಿ ಪೇಲೋಡ್ ಅನ್ನು 500 ಕಿ.ಮೀ. ದೂರದಲ್ಲಿರುವ ಕಕ್ಷೆಗೆ ತಲುಪಿಸುವ ಸಾಮರ್ಥ್ಯ ಹೊಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments