Webdunia - Bharat's app for daily news and videos

Install App

ಉದ್ಯೋಗಿಗಳ ಭವಿಷ್ಯ ನಿಧಿ ಮೇಲಿನ ತೆರಿಗೆ ಕೂಡಲೇ ಸರಕಾರ ಹಿಂಪಡೆಯಿಲಿ: ರಾಹುಲ್ ಗಾಂಧಿ

Webdunia
ಗುರುವಾರ, 3 ಮಾರ್ಚ್ 2016 (15:57 IST)
ಉದ್ಯೋಗಿಗಳ ಭವಿಷ್ಯ ನಿಧಿಯ ಮೇಲೆ ತೆರಿಗೆ ವಿಧಿಸುವುದು ಸರಿಯಲ್ಲ ಕೂಡಲೇ ಹಿಂಪಡೆಯಬೇಕು ಎಂದು ಕೇಂದ್ರ ಸರಕಾರವನ್ನು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ. 
 
ಸಂಸತ್ತಿನ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಪ್ಪು ಹಣ ಹೊಂದಿರುವ ಕಳ್ಳರಿಗಾಗಿ ಕೇಂದ್ರ ಸರಕಾರ ಫೇರ್ ಆಂಡ್ ಲವ್ಲಿ ಯೋಜನೆ ಜಾರಿಗೆ ತರುತ್ತದೆ. ಪ್ರಾಮಾಣಿಕವಾಗಿ ಜೀವನ ಸಾಗಿಸಿ ಉದ್ಯೋಗದ್ಲಲಿ ತೊಡಗಿರುವವರ ಭವಿಷ್ಯ ನಿಧಿಯ ಮೇಲೆ ಸರಕಾರ ತೆರಿಗೆ ಹಾಕುವುದು ಯಾವ ನ್ಯಾಯ ಎಂದು ಕಿಡಿಕಾರಿದರು. 
 
ಉದ್ಯೋಗಿಗಳು ನಿವೃತ್ತರಾಗುವ ಸಂದರ್ಭದಲ್ಲಿ ಆಸರೆಯಾಗುವಂತಹ ಭವಿಷ್ಯ ನಿಧಿಯ ಮೇಲೆ ತೆರಿಗೆ ಹಾಕುವುದು ಕ್ರೂರತನದ ಪರಮಾವಧಿ. ಕೇಂದ್ರ ಸರಕಾರ ಭವಿಷ್ಯ ನಿಧಿ ಮೇಲಿನ ತೆರಿಗೆ ಹಿಂಪಡೆಯದಿದ್ದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.
 
2016-2017ರ ಸಾಲಿನ ಕೇಂದ್ರ ಬಜೆಟ್ ಮಂಡನೆ ಸಂದರ್ಭದಲ್ಲಿ ಹಣಕಾಸು ಖಾತೆ ಸಚಿವ ಅರುಣ್ ಜೇಟ್ಲಿ, ಉದ್ಯೋಗಿಗಳು ಏಪ್ರಿಲ್ 1 ರಿಂದ ಭವಿಷ್ಯ ನಿಧಿ ಹಿಂಪಡೆಯುವಾಗ ಶೇ.60 ರಷ್ಟು ಹಣಕ್ಕೆ ತೆರಿಗೆ ನೀಡಬೇಕಾಗುತ್ತದೆ ಎಂದು ಹೇಳಿಕೆ ನೀಡಿರುವುದು ವಿಪಕ್ಷಗಳಲ್ಲಿ ಆಕ್ರೋಶ ಮೂಡಿಸಿದೆ. 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments