Webdunia - Bharat's app for daily news and videos

Install App

ನನ್ನ ಮಗನಿಗೆ ಯಾರು ಸಾಲ ಕೊಡಬೇಡಿ -ಮಾಜಿ ಶಾಸಕ ವಿನಂತಿ

Webdunia
ಮಂಗಳವಾರ, 5 ಜುಲೈ 2022 (17:04 IST)
ನನ್ನ ಮಗನಿಗೆ ಯಾರೂ ಸಾಲ ಕೊಡಬೇಡಿ. ದುಶ್ಚಟಕ್ಕೆ ಬಲಿಯಾಗಿ ತನ್ನ ಎಲ್ಲ ಆಸ್ತಿಯನ್ನೂ ಹಾಳು ಮಾಡಿಕೊಂಡಿದ್ದಾನೆ. ಅವನ ಬ್ಯಾಂಕ್​ ಖಾತೆಯಲ್ಲಿ ಹಣ ಇಲ್ಲದಿದ್ದರೂ ಮುಂಗಡ ಚೆಕ್​ ಕೊಟ್ಟು ಸಾಲ ತೆಗೆದುಕೊಳ್ಳುತ್ತಿದ್ದಾನೆ. ನನ್ನ ಹೆಸರನ್ನು ಹೇಳಿ ಸಾರ್ವಜನಿಕರಿಗೆ ಸುಳ್ಳು ಭರವಸೆ ಕೊಟ್ಟು ಸಾಲ ತೆಗೆದುಕೊಳ್ಳುತ್ತಿದ್ದಾನೆ.
ದಯವಿಟ್ಟು ಯಾರೂ ನನ್ನ ಮಗನಿಗೆ ಸಾಲ ಕೊಡಬೇಡಿ… ಎಂದು ಮಾಜಿ ಶಾಸಕರೊಬ್ಬರು ಸಾರ್ವಜನಿಕರಿಗೆ ಪ್ರಕಟಣೆ ಹೊರಡಿಸಿದ್ದಾರೆ.
 
ಹೌದು, ಮಗನ ನಡೆಯಿಂತ ಬೇಸತ್ತ ಮಾಜಿ ಶಾಸಕರೂ ಆದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ವಿ.ಎಸ್​.ಪಾಟೀಲ್​ ಈ ರೀತಿ ಪ್ರಕಟಣೆ ಹೊರಡಿಸಿದ್ದಾರೆ. ನನ್ನ ಸ್ವಂತ ಮಗನೇ ನನ್ನ ಹೆಸರನ್ನ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾನೆ. ನನ್ನ ಪುತ್ರ ಬಾಪೂಗೌಡ ಪಾಟೀಲ್​ಗೆ ಯಾರೂ ಸಾಲ ಕೊಡಬೇಡಿ ಎಂದು NWKSRTC ಲೆಟರ್​ಹೆಡ್​ ಮೂಲಕವೇ ಮನವಿ ಮಾಡಿದ್ದಾರೆ.
 
ಪದವೀಧರನಾದ ನನ್ನ ಮಗ, ಐದಾರು ವರ್ಷಗಳಿಂದ ದುಶ್ಚಟಕ್ಕೆ ಬಿದ್ದಿದ್ದಾನೆ. ಕೋಟಿಗಟ್ಟಲೇ ಸಾಲ ಮಾಡಿ, ಸಾಲ ತೀರಿಸಲು ಅವನ ಹೆಸರಿನಲ್ಲಿದ್ದ ಆಸ್ತಿಯನ್ನೂ ಮಾರಿದ್ದಾನೆ, ಅವನ ಮಾನಸಿಕ ಸ್ಥಿತಿ ಸರಿ ಇಲ್ಲ. ನನ್ನ ಹೆಸರನ್ನು ದುರುಪಯೋಗ ಮಾಡಿಕೊಂಡು ಜನರಿಗೆ ಸುಳ್ಳು ಹೇಳಿ ಸಾಲ ಪಡೆಯುತ್ತಿದ್ದಾನೆ. ದಯವಿಟ್ಟು ಸಾರ್ವಜನಿಕರು ನನ್ನ ಮಗನ ಮಾತಿಗೆ ಮರುಳಾಗಿ ಸಾಲ ಕೊಡಬಾರದು. ಮೋಸ ಹೋಗಬಾರದು ಎಂದು ವಿನಂತಿಸಿಕೊಂಡಿರುವ ಮಾಜಿ ಶಾಸಕರು ಮಾಧ್ಯಮಗಳಿಗೆ ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments