Select Your Language

Notifications

webdunia
webdunia
webdunia
webdunia

ಅಬಕಾರಿ ನೀತಿ ಹಗರಣ: 6ತಿಂಗಳಿನಿಂದ ಜೈಲಿನಲ್ಲಿದ್ದ ಎಎಪಿ ಸಂಸದ ಸಂಜಯ್‌ ಸಿಂಗ್‌ಗೆ ಬಿಡುಗಡೆ ಭಾಗ್ಯ

ಅಬಕಾರಿ ನೀತಿ ಹಗರಣ: 6ತಿಂಗಳಿನಿಂದ ಜೈಲಿನಲ್ಲಿದ್ದ ಎಎಪಿ ಸಂಸದ ಸಂಜಯ್‌ ಸಿಂಗ್‌ಗೆ ಬಿಡುಗಡೆ ಭಾಗ್ಯ

Sampriya

ನವದೆಹಲಿ , ಮಂಗಳವಾರ, 2 ಏಪ್ರಿಲ್ 2024 (16:01 IST)
Photo Courtesy X
ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ಕಳೆದ 6 ತಿಂಗಳಿನಿಂದ ಜೈಲಿನಲ್ಲಿದ್ದ ಆಪ್ ಸಂಸದ ಸಂಜಯ್‌ ಸಿಂಗ್‌ಗೆ ಅವರಿಗೆ ಸುಪ್ರೀಂ ಕೋರ್ಟ್‌ ಷರತ್ತು ಬದ್ಧ ಜಾಮೀನು ನೀಡಿದೆ.

ದೆಹಲಿ ಅಬಕಾರಿ ನೀತಿ ಕೇಸ್‌ನಲ್ಲಿ ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಬಂಧಿತರಾಗಿದ್ದ ಎಎಪಿ ಸಂಸದ ಸಂಜಯ್‌ ಸಿಂಗ್‌ ಅವರನ್ನು ಲೋಕಸಭೆ ಚುನಾವಣೆಗೂ ಮುನ್ನ ಅವರ ಬಿಡುಗಡೆ ಮಾಡಿದೆ.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ದೀಪಂಕರ್ ದತ್ತಾ ಮತ್ತು ಪಿಬಿ ವರಾಲೆ ಅವರ ಪೀಠವು ಆರು ತಿಂಗಳಿನಿಂದ ಜೈಲಿನಲ್ಲಿರುವ ಸಂಜಯ್ ಸಿಂಗ್ ಅವರನ್ನು ಬಿಡುಗಡೆ ಮಾಡುವಂತೆ ಆದೇಶಿಸಿದೆ.

ದಿಲ್ಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಜಯ್‌ ಸಿಂಗ್ ಅವರನ್ನು ಅಕ್ಟೋಬರ್ 4, 2023 ರಂದು ಇಡಿ ಬಂಧಿಸಿತ್ತು. ಇಡಿಯಿಂದ ಅವರ ಮೇಲೆ ಪ್ರಾಸಿಕ್ಯೂಷನ್ ದೂರು ದಾಖಲಾಗಿತ್ತು. ಇದೇ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಹಾಗೂ ಮಾಜಿ ಡಿಸಿಎಂ ಮನೀಷ್‌ ಸಿಸೋಡಿಯಾ ಕೂಡ ಇಡಿ ಬಂಧನಲ್ಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸ್ವ ಕ್ಷೇತ್ರ ವರುಣಾದಲ್ಲಿ ಸಿದ್ದರಾಮಯ್ಯಗೆ ಸೋಲಿನ ಭಯ ಕಾಡುತ್ತಿದೆ: ಆರ್‌.ಅಶೋಕ್ ವ್ಯಂಗ್ಯ