ಅಬಕಾರಿ ನೀತಿ ಪ್ರಕರಣ: ಬಿಆರ್‌ಎಸ್ ನಾಯಕಿ ಕೆ. ಕವಿತಾಗೆ ಜುಲೈ 18ರ ವರೆಗೆ ಜೈಲೇ ಗತಿ

Sampriya
ಶುಕ್ರವಾರ, 5 ಜುಲೈ 2024 (17:57 IST)
Photo Courtesy X
ನವದೆಹಲಿ:  ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಕೇಂದ್ರೀಯ ತನಿಖಾ ದಳ (ಸಿಬಿಐ) ಪ್ರಕರಣದಲ್ಲಿ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು ರೋಸ್ ಅವೆನ್ಯೂ ನ್ಯಾಯಾಲಯ ಶುಕ್ರವಾರ ಜುಲೈ 18 ರವರೆಗೆ ವಿಸ್ತರಿಸಿದೆ.

ಕೆ ಕವಿತಾ ಅವರನ್ನು ತಿಹಾರ್ ಜೈಲಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಾಯಿತು. ಆಕೆಯ ವಕೀಲರು ನ್ಯಾಯಾಂಗ ಬಂಧನವನ್ನು ಕಟುವಾಗಿ ವಿರೋಧಿಸಿದರು.

ಆಕೆಯ ವಿರುದ್ಧ ಸಲ್ಲಿಸಲಾಗಿರುವ ಚಾರ್ಜ್ ಶೀಟ್ ಅನ್ನು ರೋಸ್ ಅವೆನ್ಯೂ ಕೋರ್ಟ್ ನಾಳೆ ಪರಿಗಣಿಸುವ ಸಾಧ್ಯತೆಯಿದೆ.

ವಿಶೇಷ ಸಿಬಿಐ ನ್ಯಾಯಾಧೀಶ ಕಾವೇರಿ ಬವೇಜಾ ಅವರು ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು ಮುಂದಿನ 14 ದಿನಗಳವರೆಗೆ ವಿಸ್ತರಿಸಿದ್ದಾರೆ.

ವಿಚಾರಣೆಯ ಸಮಯದಲ್ಲಿ, ಅವರ ವಕೀಲರಾದ ಪಿ ಮೋಹಿತ್ ರಾವ್ ಅವರು ನ್ಯಾಯಾಂಗ ಬಂಧನವನ್ನು ವಿಸ್ತರಿಸುುದನ್ನು ವಿರೋಧಿಸಿದರು.

ಕೇಂದ್ರೀಯ ತನಿಖಾ ದಳ (ಸಿಬಿಐ) ಈಗಾಗಲೇ ಆಕೆಯ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದೆ. ಜುಲೈ 6 ರಂದು ಪರಿಗಣನೆಗೆ ಬಾಕಿ ಇದೆ. ಜೂನ್ 7 ರಂದು ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಸಿಬಿಐ ಸಲ್ಲಿಸಿದ ಮೂರನೇ ಪೂರಕ ಚಾರ್ಜ್ ಶೀಟ್ ಇದಾಗಿದೆ.

ಸಿಬಿಐ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕವಿತಾ ನ್ಯಾಯಾಂಗ ಬಂಧನದಲ್ಲಿದ್ದಾರೆ. ಆಕೆಯನ್ನು ಮೊದಲು ಮಾರ್ಚ್ 15 ರಂದು ಜಾರಿ ನಿರ್ದೇಶನಾಲಯ  ಬಂಧಿಸಿತು. ನಂತರ, ಆಕೆಯನ್ನು ಏಪ್ರಿಲ್ 11 ರಂದು ಸಿಬಿಐ ಬಂಧಿಸಿತು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments