ರೋಚಕವಾದ ದೃಶ್ಯ ! ಮನೆಗೇ ಬಂದು ಗುಂಡು ಹೊಡೆದ ದುಷ್ಕರ್ಮಿಗಳು

Webdunia
ಭಾನುವಾರ, 21 ನವೆಂಬರ್ 2021 (07:21 IST)
ಪಶ್ಚಿಮ ಬಂಗಾಳದಲ್ಲಿ ಎಷ್ಟು ಹೊತ್ತಿಗೆ ಯಾವ ಪಕ್ಷದ ಮುಖಂಡನ ಮೇಲೆ ದಾಳಿಯಾಗುತ್ತದೆ? ಯಾರಿಗೆ ಗುಂಡೇಟು ಬೀಳುತ್ತದೆ ಎಂದೇ ಗೊತ್ತಾಗುವುದಿಲ್ಲ.
ಸದಾ ಒಬ್ಬರಲ್ಲ ಒಬ್ಬ ರಾಜಕೀಯ ಮುಖಂಡರ ಮೇಲೆ ಹಲ್ಲೆಯಾಗುತ್ತದೆ. ಕೊಲೆಗಳು ನಡೆಯುತ್ತವೆ. ಇದೀಗ ಅಲ್ಲಿನ ಆಡಳಿತ ಪಕ್ಷ ತೃಣಮೂಲ ಕಾಂಗ್ರೆಸ್ ನಾಯಕ ಮಹ್ರಮ್ ಶೇಖ್ರನ್ನು ಅವರ ಮನೆಯ ಹೊರಗೇ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಪಶ್ಚಿಮ ಬಂಗಾಳದ 24 ಪರಗಣ ಜಿಲ್ಲೆಯಲ್ಲಿ ಶನಿವಾರ ರಾತ್ರ ದುರ್ಘಟನೆ ನಡೆದಿದೆ. 
ಶನಿವಾರ ತಡರಾತ್ರಿ ಹೊತ್ತಿಗೆ ಮಹ್ರಮ್ ಶೇಖ್ ಮನೆಗೆ ಬಂದ ದುಷ್ಕರ್ಮಿಗಳು ಅವರಿಗೆ ಗುಂಡುಹೊಡೆದಿದ್ದಾರೆ. ನಂತರ ಪರಾರಿಯಾಗಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಪ್ರಯೋಜನ ಆಗಲಿಲ್ಲ. ಭಾನುವಾರ ಮುಂಜಾನೆ ಹೊತ್ತಿಗೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಪಟ್ಟಂತೆ ಒಬ್ಬ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ ಪ್ರಮುಖ ಆರೋಪಿ ನಾಪತ್ತೆಯಾಗಿದ್ದು, ಆತನನ್ನು ಹಿಡಿಯುವ ಪ್ರಯತ್ನಗಳು ನಡೆಯುತ್ತಿವೆ.  ಯಾವ ಕಾರಣಕ್ಕಾಗಿ ಹತ್ಯೆ ನಡೆದಿದೆ ಎಂಬಿತ್ಯಾದಿ ವಿಚಾತವಾಗಿ ತನಿಖೆ ಪ್ರಾರಂಭವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಚುನಾವಣೆ ಫಲಿತಾಂಶ ದಿನವೇ ವಿದೇಶಕ್ಕೆ ಹಾರಲಿರುವ ರಾಹುಲ್ ಗಾಂಧಿ: ತಿಂಗಳಂತ್ಯದವರೆಗೂ ಫಾರಿನ್ ಟೂರ್

ಸಿದ್ದರಾಮಯ್ಯಗೆ ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸೋ ಚಾಳಿ: ಸಿಟಿ ರವಿ ವಾಗ್ದಾಳಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ನಾಚಿಕೆಯಿಲ್ಲದೇ ಸುಳ್ಳು ಹೇಳುವ ಪ್ರಲ್ಹಾದ್ ಜೋಶಿಗೆ ಮಾನ ಮರ್ಯಾದೆ ಇದ್ಯಾ: ಸಿದ್ದರಾಮಯ್ಯ ಗರಂ

ಮುಂದಿನ ಸುದ್ದಿ
Show comments