Webdunia - Bharat's app for daily news and videos

Install App

ನೋಟು ನಿಷೇಧದಲ್ಲಿ 3-5 ಲಕ್ಷ ಕೋಟಿ ಅವ್ಯವಹಾರ: ಪ್ರಧಾನಿ ಮೋದಿ ವಿರುದ್ಧ ಬಾಬಾ ರಾಮದೇವ್ ಗುಡುಗು

Webdunia
ಶುಕ್ರವಾರ, 16 ಡಿಸೆಂಬರ್ 2016 (13:36 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ಆತ್ಮಿಯ ಬಳಗದಲ್ಲಿದ್ದ ಬಾಬಾ ರಾಮದೇವ್ ಇದೀಗ ಉಲ್ಟಾ ಹೊಡೆದಿದ್ದು, ನೋಟು ನಿಷೇಧದಲ್ಲಿ 3 ರಿಂದ 5 ಲಕ್ಷ ಕೋಟಿ ಅವ್ಯವಹಾರವಾಗಿದೆ ಎಂದು ಆರೋಪಿಸಿದ್ದಾರೆ.
 
ಆಮ್ ಆದ್ಮಿ ಪಕ್ಷದ ಮುಖ್ಯಸ್ಥ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ನೋಟು ನಿಷೇಧದಲ್ಲಿ 8 ಲಕ್ಷ ಕೋಟಿ ಅವ್ಯವಹಾರವಾಗಿದೆ ಎಂದು ಆರೋಪಿಸಿರುವ ಮಧ್ಯೆ, ಬಾಬಾ ರಾಮದೇವ್ ಕೂಡಾ ಆರೋಪ ಮಾಡಿರುವುದು ಬಿಜೆಪಿಗೆ ಆಘಾತ ತಂದಿದೆ.  
 
ಮಾಧ್ಯಮಗಳೊಂದಿಗೆ ಮಾತನಾಡಿದ ಬಾಬಾ ರಾಮದೇವ್, ಭ್ರಷ್ಟ ಬ್ಯಾಂಕರ್‌ಗಳ ಸಲಹೆ ಪಡೆದ ಮೋದಿ ದೇಶಾದ್ಯಂತ ನೋಟು ನಿಷೇಧ ಜಾರಿಗೊಳಿಸಿದ್ದಾರೆ. ನೋಟು ನಿಷೇಧ ಜಾರಿಯಲ್ಲಿ 3-5 ಲಕ್ಷ ಕೋಟಿ ಅವ್ಯವಹಾರವಾಗಿದೆ ಎಂದು ಕಿಡಿಕಾರಿದ್ದಾರೆ. 
 
ನೋಟು ನಿಷೇಧದಲ್ಲಿ ಭಾರಿ ಪ್ರಮಾಣದ ಭ್ರಷ್ಟಾಚಾರವಾಗಿರುವುದಲ್ಲದೇ ಅದನ್ನು ಜಾರಿಗೊಳಿಸಿರುವ ಕ್ರಮವಂತೂ ಹೀನಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ದೇಶಾದ್ಯಂತ ನೋಟು ನಿಷೇಧದಿಂದಾಗಿ ಬಡವರಿಗೆ, ಮಧ್ಯಮ ವರ್ಗದವರು ಜೀವನ ನಡೆಸಲಾರದಂತಹ ಸ್ಥಿತಿ ಅನುಭವಿಸುತ್ತಿದ್ದಾರೆ. ಕೂಡಲೇ ಕೇಂದ್ರ ಸರಕಾರ ನೋಟು ನಿಷೇಧವನ್ನು ಹಿಂಪಡೆಯಬೇಕು ಎಂದು ಯೋಗ ಗುರು ಬಾಬಾ ರಾಮದೇವ್ ಪ್ರಧಾನಿ ಮೋದಿಯವರನ್ನು ಒತ್ತಾಯಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments