Webdunia - Bharat's app for daily news and videos

Install App

ಉಚ್ಛಾಟಿತ ಬಿಜೆಪಿ ನಾಯಕನ ಬಂಧನ

Webdunia
ಶುಕ್ರವಾರ, 29 ಜುಲೈ 2016 (16:56 IST)
ಉಚ್ಛಾಟಿತರಾಗಿರುವ ಬಿಜೆಪಿ ನಾಯಕ ದಯಾಶಂಕರ್ ಸಿಂಗ್ ಅವರನ್ನು ಬಿಹಾರದ ಬಕ್ಸಾರ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಬಿಎಸ್‌ಪಿ ನಾಯಕಿ ಮಾಯಾವತಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಅವರ ವಿರುದ್ಧ ಹಲವು ದಿನಗಳ ಹಿಂದೆ ಪ್ರಕರಣ ದಾಖಲಾಗಿತ್ತು.  ಉತ್ತರ ಪ್ರದೇಶ ಹಾಗೂ ಬಿಹಾರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಿಜೆಪಿ ಉತ್ತರಪ್ರದೇಶ ಮಾಜಿ ಉಪಾಧ್ಯಕ್ಷರಾಗಿದ್ದ ಸಿಂಗ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಇತ್ತೀಚಿಗೆ ಸಿಂಗ್ ಜಾರ್ಖಂಡ್‌ನ ದಿಯೋಗಢ ಜಿಲ್ಲೆಯ ಶಿವ ದೇವಸ್ಥಾನದಲ್ಲಿ ಕಾಣಿಸಿಕೊಂಡಿದ್ದರು. ದೇವಸ್ಥಾನದ ಅರ್ಚಕ ಸಿಂಗ್ ಜತೆಗಿದ್ದ ಫೋಟೋವನ್ನು ಫೇಸ್‌ಬುಕ್‌ನಲ್ಲಿ ಪ್ರಕಟಿಸಿದ್ದರು. ಬಳಿಕ ಅದನ್ನು ಡಿಲಿಟ್ ಮಾಡಲಾಗಿತ್ತು.

ಬಿಎಸ್‌ಪಿ ನಾಯಕಿ ಮಾಯಾವತಿ ಅವರು ವೇಶ್ಯೆಗಿಂತ ಕಡೆ ಎಂದು ಸಿಂಗ್ ಹೇಳಿದ್ದು ವಿವಾದವನ್ನು ಹುಟ್ಟಿ ಹಾಕಿತ್ತು. ದಯಾಶಂಕರ್ ಅವರ ಹೇಳಿಕೆಗೆ ಸಂಸತ್ತಿನಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಪಕ್ಷದ ಹುದ್ದೆಗಳಿಂದ ಅವರನ್ನು ವಜಾ ಮಾಡಲಾಗಿತ್ತು.

ಚುನಾವಣೆ ಸಂದರ್ಭದಲ್ಲಿ ಬಿಎಸ್‌ಪಿ ಹೆಚ್ಚು ಹಣ ನೀಡಿದ ಅಭ್ಯರ್ಥಿಗಳಿಗೆ ಟಿಕೆಟ್‌ ಹಂಚಿಕೆ ಮಾಡುವ ಮೂಲಕ  ಚುನಾವಣಾ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ದಯಾಶಂಕರ್‌ ಸಿಂಗ್‌ ಆರೋಪಿಸಿದ್ದರು.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments