Webdunia - Bharat's app for daily news and videos

Install App

ಭಾರತದಿಂದ ಶಸ್ತ್ರಾಸ್ತ್ರಗಳ ರಫ್ತು

Webdunia
ಸೋಮವಾರ, 31 ಜನವರಿ 2022 (14:33 IST)
ಮೋದಿಯವರ ‘ಆ್ಯಕ್ಟ್ ಈಸ್ಟ್’ ಪಾಲಿಸಿ ಈಗ ಭಾರತದ ರಕ್ಷಣಾ ಉತ್ಪನ್ನಗಳಿಗೆ ಬೃಹತ್ ಮಾರುಕಟ್ಟೆಯನ್ನೇ ತೆರೆದಿದೆ.
 
ದಕ್ಷಿಣ ಚೀನಾ ಸಾಗರ ಪ್ರದೇಶದಲ್ಲಿ ಇರುವ ಎಲ್ಲ ದೇಶಗಳಿಗೆ ಚೀನಾದಿಂದ ಅಭದ್ರತೆ ಕಾಡುತ್ತಿದೆ. ಅದನ್ನು ಸಮರ್ಥವಾಗಿ ಎದುರಿಸಲು ಅವುಗಳಿಗೆ ಸೂಕ್ತವಾದ ಶಸ್ತ್ರಾಸ್ತ್ರಗಳ ಅಭಾವ ಇದೆ.

ಹೀಗಾಗಿ ಅವು ಭಾರತದ ಕಡೆ ಮುಖ ಮಾಡಿವೆ. ಇತ್ತೀಚೆಗೆ ಚೀನಾ ಫಿಲಿಪ್ಪೀನ್ಸ್ನ ಕಡಲ ತೀರದಲ್ಲಿ ಅದರ ಮೀನುಗಾರಿಕಾ ಹಡಗುಗಳಿಗೆ ತೊಂದರೆ ಕೊಟ್ಟಿತ್ತು. ಚೀನಾದ ಯುದ್ಧ ನೌಕೆಗಳನ್ನು ಸಮರ್ಥವಾಗಿ ಎದುರಿಸಲು ಭಾರತದ ಬ್ರಹ್ಮೋಸ್ ಕ್ರೂಸ್ ಕ್ಷಿಪಣಿಗಿಂತ ಉತ್ತಮವಾದ ಆಯುಧ ಜಗತ್ತಿನಲ್ಲೇ ಇಲ್ಲ.

ವಿಯೆಟ್ನಾಂ ಕೂಡ ಭಾರತದ ಬ್ರಹ್ಮೋಸ್ ಕ್ಷಿಪಣಿಗೆ ಆಸಕ್ತಿ ಹೊಂದಿದ್ದು, ಮುಂದಿನ ತಿಂಗಳು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಲ್ಲಿಗೆ ಭೇಟಿ ನೀಡುವ ಸಾಧ್ಯತೆ ಇದೆ. ಸೌದಿ ಅರೇಬಿಯಾ ಭಾರತದ ಬ್ರಹ್ಮೋಸ್ ಕ್ಷಿಪಣಿಯ ಬಗ್ಗೆ ಆಸಕ್ತಿ ತೋರಿಸಿದೆ.

ಇಂಡೋನೇಷ್ಯಾ, ಮಾಲ್ಡೀವ್್ಸ ಮುಂತಾದ ದೇಶಗಳು ಭಾರತದಿಂದ ಬ್ರಹ್ಮೋಸ್, ಆಕಾಶ್ ಕ್ಷಿಪಣಿ ವ್ಯವಸ್ಥೆಯನ್ನು ಖರೀದಿಸುವಲ್ಲಿ ಆಸಕ್ತಿ ತೋರಿವೆ. ಇದರ ಜೊತೆಗೆ ಭಾರತದ ಲಘು ಹೆಲಿಕಾಪ್ಟರ್ಗಳಿಗೆ ವಿಯೆಟ್ನಾಂ ಮತ್ತು ಮಾರಿಷಸ್ ದೇಶಗಳು ಆಸಕ್ತಿ ತೋರಿಸಿವೆ.

2016-17ರಲ್ಲಿ ಭಾರತದ ರಕ್ಷಣಾ ಕ್ಷೇತ್ರದ ರಫ್ತು 1,521 ಕೋಟಿ ರು. ಇದ್ದದ್ದು 2020-21ರಲ್ಲಿ 8,434 ಕೋಟಿ ರು. ಆಗಿದೆ. 2025ಕ್ಕೆ ಇದನ್ನು 35 ಸಾವಿರ ಕೋಟಿ ರು.ಗೆ ತಲುಪಿಸುವುದು ಮೋದಿ ಸರ್ಕಾರದ ಗುರಿ.

ದಕ್ಕೆ ಭಾರತ ಬ್ರಹ್ಮೋಸ್ನಂತೆಯೇ ಉಳಿದ ತಂತ್ರಜ್ಞಾನವನ್ನೂ ಅಭಿವೃದ್ಧಿಪಡಿಸಬೇಕು. ಎಚ್ಎಎಲ್ ನಿರ್ಮಿಸಿದ ತೇಜಸ್ ಯುದ್ಧ ವಿಮಾನಕ್ಕೆ ಆಗ್ನೇಯ ಏಷ್ಯಾ ದೇಶಗಳಿಂದ ಬೇಡಿಕೆ ಬರುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲೋಕಸಭೆ ಚುನಾವಣೆಯಲ್ಲಿ ನಡೆದ ಮತಗಳ್ಳತನದ ತನಿಖೆ ನಡೆಸುತ್ತೇವೆ: ಸಿದ್ದರಾಮಯ್ಯ

ವಿಷ್ಣುವರ್ಧನ್ ಸಮಾಧಿ ನೆಲಸಮ ಮಾಡುವ ಬಗ್ಗೆ ಕುಟುಂಬಕ್ಕೆ ಮಾಹಿತಿ ಇತ್ತಾ: ಅನಿರುದ್ಧ ಹೇಳಿದ್ದೇನು

ಧರ್ಮಸ್ಥಳ ಬುರುಡೆ ರಹಸ್ಯ: ರತ್ನಗಿರಿ ಬೆಟ್ಟಕ್ಕೆ ತೆರಳಿದ ಎಸ್‌ಐಟಿ ತಂಡಕ್ಕೆ ಬಿಗ್‌ಶಾಕ್

ಧರ್ಮಸ್ಥಳ ಕಳೇಬರಹ ಶೋಧ ಕಾರ್ಯಚರಣೆಯಲ್ಲಿ ಬಿಗ್‌ಟ್ವಿಸ್ಟ್‌, ವರಸೆ ಬದಲಾಯಿಸಿದ ಮಾಸ್ಕ್‌ಮ್ಯಾನ್‌

ಮೆಟ್ರೋ ನಮ್ದು ಎಂದು ಬಿಜೆಪಿಯವರು ಬಿಲ್ಡಪ್ ತೆಗೆದುಕೊಳ್ಳುತ್ತಿದ್ದಾರೆ: ರಾಮಲಿಂಗಾ ರೆಡ್ಡಿ

ಮುಂದಿನ ಸುದ್ದಿ
Show comments