Webdunia - Bharat's app for daily news and videos

Install App

ಫೇಸ್‌ಬುಕ್ ಗೆಳೆತನ: ನಂಬಿದ ಯುವತಿಗೆ ಯುವಕ ಮಾಡಿದ್ದೇನು ಗೊತ್ತಾ?

Webdunia
ಗುರುವಾರ, 23 ನವೆಂಬರ್ 2023 (14:30 IST)
ಸಾಮಾಜಿಕ ಜಾಲತಾಣದಲ್ಲಿ ಗೆಳೆತನ ಮಾಡಿ ಜೀವನವನ್ನೇ ವಿನಾಶದತ್ತ ತಳ್ಳುತ್ತಿರುವ ಹಲವಾರು ನಿದರ್ಶನಗಳು ನಮ್ಮೆದುರಿಗೆ ಇವೆ. ಆದಾಗ್ಯೂ ಯುವಕ ಯುವತಿಯರ ಸೋಷಿಯಲ್ ಮೀಡಿಯಾ ಚೆಲ್ಲಾಟ ಮುಂದುವರಿದಿದೆ. ಇದೀಗ ಅಪ್ರಾಪ್ತ ಬಾಲಕಿಯ ಗೆಳೆತನ ಸಂಪಾದಿಸಿ ಗರ್ಭಿಣಿಯಾಗಿಸಿ ಕೈಕೊಟ್ಟ ಗೆಳಯನಿಗಾಗಿ ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ.
 
ಅಪ್ರಾಪ್ತ ಬಾಲಕಿಯ ಮೇಲೆ ಆಕೆಗೆ ಫೇಸ್‌ಬುಕ್‌ನಲ್ಲಿ ಪರಿಚಯವಾಗಿದ್ದ ವ್ಯಕ್ತಿ ಅತ್ಯಾಚಾರವೆಸಗಿದ ಹೇಯ ಘಟನೆ ಪುಣೆಯಲ್ಲಿ ನಡೆದಿದೆ.
 
ಶಂಕಿತ ಆರೋಪಿ ಮುಂಬೈ ನಿವಾಸಿ ಎಂದು ಹೇಳಲಾಗುತ್ತಿದ್ದು, ಪದವಿಯನ್ನು ಮುಗಿಸಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾನೆ. ಫೇಸ್‌ಬುಕ್‌ನಲ್ಲಿ ಪೀಡಿತ ಬಾಲಕಿಯ ಸ್ನೇಹ ಸಂಪಾದಿಸಿದ್ದ ಆತ ಸದಾ ಆಕೆಯೊಂದಿಗೆ ಚಾಟ್ ಮಾಡುತ್ತಿದ್ದ. ಸ್ವಲ್ಪ ದಿನಗಳ ಬಳಿಕ ನಿನ್ನನ್ನು ಮದುವೆಯಾಗುವುದಾಗಿ ಪುಸಲಾಯಿಸಿದ ಆತ ಭೇಟಿಯಾಗಲು ಪುಣೆಗೆ ಬರುವಂತೆ ಆಹ್ವಾನಿಸಿದ. 
 
ಆತನ ಮಾತಿಗೆ ಒಪ್ಪಿ ಆಕೆ ಪುಣೆಗೆ ಬರುತ್ತಿದ್ದಂತೆ ಲಾಡ್ಜ್ ಒಂದಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ. ಸ್ವಲ್ಪ ದಿನಗಳ ಬಳಿಕ ಆಕೆ ತಾನು ಗರ್ಭಿಣಿಯಾಗಿದ್ದೇನೆ ಎಂದಾಕೆ ಆತನಿಗೆ ತಿಳಿಸಿದ್ದಾಳೆ. ಆಗ ಆತ ಗರ್ಭಪಾತ ಮಾಡಿಕೊಳ್ಳುವಂತೆ ಒತ್ತಾಯಿಸಿದ್ದಾನೆ. 
 
ಬಳಿಕ ಆಕೆಯಿಂದ ದೂರವಿರಲು ಪ್ರಯತ್ನಿಸಿದ್ದಾನಾತ. ಬೆದರಿದ ಬಾಲಕಿ ಪುಣೆಗೆ ಬಂದು ಆತನ ಪೋಷಕರ ಬಳಿ ನಡೆದ ಎಲ್ಲ ಸಂಗತಿಯನ್ನು ಹೇಳಿದ್ದಾಳೆ. ಆದರೆ ಅವರು ಕೂಡ ಆಕೆಯ ಮಾತಿಗೆ ಗಮನವೇ ಕೊಟ್ಟಿಲ್ಲ. ಬಳಿಕ ಪೊಲೀಸ್ ಠಾಣೆಗೆ ಹೋದ ಬಾಲಕಿ ಈ ತನಗಾದ ಅನ್ಯಾಯದ ವಿರುದ್ಧ ದೂರು ನೀಡಿದ್ದಾಳೆ.
 
ಆರೋಪಿಯ ವಿರುದ್ಧ ಪೋಸ್ಕೋ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು ಆತನನಿನ್ನು ಬಂಧಿಸಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ವಿಭು ಬಖ್ರು ಪ್ರಮಾಣ ವಚನ ಸ್ವೀಕಾರ

ಸಾಧನಾ ಸಮಾವೇಶ ನಡೆಸುತ್ತಿರುವ ಸಿದ್ದರಾಮಯ್ಯಗೆ 17 ಪ್ರಶ್ನೆ ಹಾಕಿದ ಆರ್ ಅಶೋಕ್

ನಾಲ್ವಡಿ ಕೃಷ್ಣರಾಜ ಒಡೆಯರ್ ನಂತರ ಮೈಸೂರನ್ನು ಅಭಿವೃದ್ಧಿಸಿದ್ದೆ ಸಿದ್ದರಾಮಯ್ಯ: ಎಚ್ ಸಿ ಮಹದೇವಪ್ಪ

Viral video: ಕಂಪನಿ ಎಚ್ ಆರ್ ಜೊತೆ ಅಫೇರ್: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸಿಇಒ

ಸಿದ್ದರಾಮಯ್ಯನವರ ಕುರ್ಚಿ ಅಲ್ಲಾಡಿದಾಗ ಸಾಧನಾ ಸಮಾವೇಶ: ವಿಜಯೇಂದ್ರ

ಮುಂದಿನ ಸುದ್ದಿ
Show comments