Webdunia - Bharat's app for daily news and videos

Install App

ಮಾತುಕತೆಗೆ ಸಹಕರಿಸದ ಪ್ರತ್ಯೇಕತಾವಾದಿಗಳಿಗೆ ಸೌಲಭ್ಯಗಳು ಕಟ್

Webdunia
ಬುಧವಾರ, 7 ಸೆಪ್ಟಂಬರ್ 2016 (16:47 IST)
ಕಣಿವೆಯಲ್ಲಿ ಶಾಂತಿ ಮರುಸ್ಥಾಪಿಸುವ ಯತ್ನಕ್ಕೆ ಪ್ರತ್ಯೇಕತಾವಾದಿಗಳು ಸಹಕಾರ ನೀಡದಿದ್ದರಿಂದ ಅವರಿಗೆ ನೀಡಿದ್ದ ಸೌಲಭ್ಯಗಳನ್ನು ಮೊಟಕು ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಪ್ರತ್ಯೇಕತಾವಾದಿ ಮುಖಂಡರಿಗೆ 24 ಗಂಟೆ ಭದ್ರತೆ ಮತ್ತು ರೋಗಪೀಡಿತ ಮುಖಂಡರಿಗೆ ಹೈಟೆಕ್ ವೈದ್ಯಕೀಯ ಸೌಲಭ್ಯಗಳನ್ನು ಕಡಿತ ಮಾಡಲು ನಿರ್ಧರಿಸಲಾಗಿದೆ.

ಪಾಸ್‌ಪೋರ್ಟ್ ಹಿಂತೆಗೆದುಕೊಳ್ಳುವ ಮೂಲಕ ವಿದೇಶ ಪ್ರಯಾಣವನ್ನು ಅವರಿಗೆ ಕಷ್ಟವಾಗಿಸಲಾಗುತ್ತದೆ ಎಂದು ಅಧಿಕೃತ ಮೂಲಗಳು ಹೇಳಿವೆ. ಪ್ರತ್ಯೇಕತಾವಾದಿಗಳಿಗೆ ಕಠಿಣ ಸಂದೇಶ ಕಳಿಸಲು ಅವರ ಬ್ಯಾಂಕ್ ಖಾತೆ ಪರಿಶೀಲನೆ ಮತ್ತು ಅವರ ವಿರುದ್ಧ ಬಾಕಿಯಿರುವ ತನಿಖೆ ಮುಗಿಸಲು ತನಿಖೆದಾರರಿಗೆ ಸೂಚಿಸಬಹುದು.
 
ಪ್ರತ್ಯೇಕತಾವಾದಿ ನಾಯಕರಿಗೆ ನೀಡುವ ಸೌಲಭ್ಯಗಳ ಮರುಪರಿಶೀಲನೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದಾರೆ. ಕಾಶ್ಮೀರದಲ್ಲಿನ ವಾಸ್ತವ ಸ್ಥಿತಿಗತಿ ಮತ್ತು ರಾಜ್ಯಕ್ಕೆ ಸರ್ವಪಕ್ಷ ನಿಯೋಗದ ಭೇಟಿ ಕುರಿತು ರಾಜನಾಥ್ ಸಿಂಗ್ ಪ್ರಧಾನಿಗೆ ಮನವರಿಕೆ ಮಾಡಿಕೊಟ್ಟ ಬಳಿಕ ಪ್ರಧಾನಿ ಸೂಚನೆ ಹೊರಬಿದ್ದಿದೆ.
 
ಪ್ರತ್ಯೇಕತಾವಾದಿಗಳು ಹಿಂಸಾತ್ಮಕ ಪ್ರತಿಭಟನೆಗಳನ್ನು ಕೊನೆಗೊಳಿಸಲು ಸಹಾಯಹಸ್ತ ನೀಡುತ್ತಿಲ್ಲ ಎಂದು ಸರ್ಕಾರ ಹೇಳಿದೆ. ಆದರೆ ಕೇಂದ್ರ ಸರ್ಕಾರ ರಾಜ್ಯದ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಿಲ್ಲ ಎಂದು ಪ್ರತ್ಯೇಕತಾವಾದಿಗಳು ದೂರಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಆರೋಗ್ಯದಲ್ಲಿ ಚೇತರಿಕೆ: ಮಹಿಳೆಗೆ ಒತ್ತಡ, ದೂರು

ಏರ್‌ ಇಂಡಿಯಾ ದುರಂತದ ಬಳಿಕ ವಿಮಾನದಲ್ಲಿ ಈ ಸೀಟಿಗಾಗಿ ಹೆಚ್ಚಿದ ಬೇಡಿಕೆ

ಮುಂದಿನ ಸುದ್ದಿ
Show comments