ಅಂಗವಿಕಲ ಮಕ್ಕಳ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಪಾಲ್ಗೊಂಡಿದ್ದ ಸಚಿವರೊಬ್ಬರು ತಮ್ಮ ಜತೆ ಗನ್ ಸಹ ಕೊಂಡೊಯ್ದು ವಿವಾದಕ್ಕೀಡಾಗಿದ್ದಾರೆ.
ಅಂಗವಿಕಲ ಮಕ್ಕಳಿಗೆ ಸಂಬಂಧಿಸಿದ ಕಾರ್ಯಕ್ರಮಕ್ಕೆ ಹೋಗಿದ್ದ ಮಹಾರಾಷ್ಟ್ರದ ಜಲಸಂಪನ್ಮೂಲ ಸಚಿವ, ಬಿಜೆಪಿ ನಾಯಕ ಗಿರೀಶ್ ಮಹಾಜನ್ ರಿವಾಲ್ವರ್ನ್ನು ಸೊಂಟಕ್ಕೆ ಸಿಕ್ಕಿಸಿಕೊಂಡಿದ್ದು ಸ್ಪಷ್ಟವಾಗಿ ಗೋಚರಿಸುತ್ತಿತ್ತು.
ಮಹಾರಾಷ್ಟ್ರ ವಿಧಾನಸಭೆ ಮತ್ತು ವಿಧಾನಸಭೆಗಳಲ್ಲಿ ಸಹ ಈ ವಿಷಯ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು ಭಾರೀ ಖಂಡನೆ ವ್ಯಕ್ತವಾಗಿದೆ.
ತಮ್ಮ ಕೃತ್ಯವನ್ನು ಸಮರ್ಥಿಸಿಕೊಂಡಿರುವ ಸಚಿವರು, "ಆತ್ಮರಕ್ಷಣೆಗಾಗಿ ಗನ್ ಇರಿಸಿಕೊಂಡಿದ್ದು ಹೌದು, ಆದರೆ ಅದನ್ನು ನಾನು ಅದನ್ನು ಬಳಸಿಲ್ಲ. ನನ್ನ ಬದುಕಿನಲ್ಲಿ ಇಲ್ಲಿಯವರೆಗೆ ನಾನು ಯಾವುದೇ ರೀತಿಯ ಹಿಂಸಾಚಾರದ ಕೃತ್ಯಗಳಲ್ಲಿ ಪಾಲ್ಗೊಂಡಿಲ್ಲ", ಎಂದಿದ್ದಾರೆ.