ರಾಷ್ಟ್ರಪತಿ ರಾಮನಾಥ್ ಕೋವಿಂದ್ಗೆ ಬೀಳ್ಕೊಡುಗೆ

Webdunia
ಭಾನುವಾರ, 24 ಜುಲೈ 2022 (10:38 IST)
ನವದೆಹಲಿ : ರಾಜ್ಯಸಭಾ ಮತ್ತು ಲೋಕಸಭೆಯ ಸಂಸದರಿಂದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಬೀಳ್ಕೊಡುಗೆ ಸಮಾರಂಭವು ಇಂದು ಸಂಸತ್ತಿನಲ್ಲಿ ನಡೆದಿದೆ.

ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ ಎಲ್ಲರಿಗೂ ಧನ್ಯವಾದ ಎಂದು ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ತಮ್ಮ ಬೀಳ್ಕೊಡುಗೆ ಸಮಾರಂಭದಲ್ಲಿ ಹೇಳಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಯೋಜಿಸಿದ ಬೀಳ್ಗೊಡುಗೆ ಹಾಗೂ ಔತಣಕೂಟ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕೋವಿಂದ್ ಅವರು, ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ ಎಲ್ಲರಿಗೂ ಧನ್ಯವಾದ ಅರ್ಪಿಸಿದರು.

ಬಳಿಕ ಸುದೀರ್ಘ ಭಾಷಣ ಮಾಡಿದ ಅವರು, 5 ವರ್ಷಗಳ ಹಿಂದೆ ಇದೇ ವೇದಿಕೆಯಲ್ಲಿ ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ್ದೆ. ಇದೀಗ ಹಲವು ಸ್ಮರಣೀಯ ನೆನೆಪುಗಳನ್ನು ಹೊತ್ತು ವಿದಾಯ ಹೇಳುತ್ತಿದ್ದೇನೆ. ಎಲ್ಲ ಸಂಸದರಿಗೂ ನನ್ನ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದರು.

ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಭಾರತ ಶಕ್ತವಾಗಿ ಹೋರಾಟ ಮಾಡಿದ್ದು, ಕಡಿಮೆ ಸಮಯದಲ್ಲಿ 200 ಕೋಟಿ ಲಸಿಕೆ ನೀಡುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಕಡಿಮೆ ಅವಧಿಯಲ್ಲಿ ಲಸಿಕೆ ಅಭಿವೃದ್ಧಿ ಪಡಿಸಿ, ಸೋಂಕು ನಿಯಂತ್ರಿಸಿದ್ದೇವೆ.

ಇದರಿಂದ ಭವಿಷ್ಯದಲ್ಲಿ ಎದುರಾಗಲು ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಮಾರ್ಗಸೂಚಿಯನ್ನು ನಿರ್ಮಿಸಲಾಗಿದೆ. ಇದು ಅಭಿನಂದನೆಗೆ ಅರ್ಹ. ಕಷ್ಟದ ಸಮಯದಲ್ಲಿ, ಭಾರತದ ಪ್ರಯತ್ನಗಳನ್ನು ಪ್ರಪಂಚದಾದ್ಯಂತ ಶ್ಲಾಘಿಸಲಾಗಿದೆ ಎಂದು ಕೋವಿಂದ್ ತಿಳಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದೂ ಇರಲಿದೆಯಾ ಸೈಕ್ಲೋನ್ ಮೊಂಥಾ ಇಫೆಕ್ಟ್, ಇಲ್ಲಿದೆ ಹವಾಮಾನ ವರದಿ

ಪ್ರೈವೆಸಿಗೆ ಅಡ್ಡಿಯಾಗುತ್ತಾಳೆಂದು ಮಗಳನ್ನು ಮುಗಿಸಿದ ಮಲತಂದೆ ಕೊನೆಗೂ ಅರೆಸ್ಟ್‌

ಹಂಪಿಯಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಪತ್ತೆ, ಎಲ್ಲಿ ಗೊತ್ತಾ

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮಹದೇವಪ್ಪರನ್ನು ಭೇಟಿಯಾಗಿ ನವೆಂಬರ್ ಕ್ರಾಂತಿ ಬಗ್ಗೆ ಪರಮೇಶ್ವರ್ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments