Webdunia - Bharat's app for daily news and videos

Install App

ಒಂದು ಕೆಜಿ ಈರುಳ್ಳಿಗೆ 5 ಪೈಸೆ?

Webdunia
ಬುಧವಾರ, 24 ಆಗಸ್ಟ್ 2016 (17:22 IST)
ಮಹಾರಾಷ್ಟ್ರದಲ್ಲಿ ಈರುಳ್ಳಿ ಸಗಟು ಮಾರಾಟ ಬೆಲೆ ನೆಲಕಚ್ಚಿದ್ದು, ಹರಾಜೊಂದರಲ್ಲಿ ರೈತನಿಗೆ ಒಂದು ಕೆ.ಜಿ ಈರುಳ್ಳಿಯನ್ನು ಐದು ಪೈಸೆಗೆ ಕೇಳಲಾಗಿದೆ. ಇದು ಸಗಟು ಮಾರುಕಟ್ಟೆಯಲ್ಲಿ ರೈತರು ಎದುರಿಸುತ್ತಿರುವ ದಯನೀಯ ಸ್ಥಿತಿಯನ್ನು ಜಾಹೀರುಗೊಳಿಸಿದೆ.

ಈರುಳ್ಳಿಯ ಅತಿರಿಕ್ತ ಉತ್ಪಾದನೆಯಿಂದಾಗಿ ಕಳೆದ ಎರಡು ತಿಂಗಳಿಂದ ರೈತರ ಪರಿಸ್ಥಿತಿ ಶೋಚನೀಯವಾಗುತ್ತಿದೆ. ಮಂಗಳವಾರ ಹರಾಜಿನಲ್ಲಿ ಪಾಲ್ಗೊಂಡಿದ್ದ ನನಗೆ ಒಂದು ಕಿಲೋಗೆ ಐದು ಪೈಸೆಯನ್ನು ಆಫರ್ ಮಾಡಲಾಯಿತು ಎಂದು ನಿಪಾಡ್ ತಾಲ್ಲೂಕಿನ ಸೈಖೇಡಾದ ರೈತ ಸುಧಾಕರ್ ದಾರದೆ ಅಳಲು ತೋಡಿಕೊಂಡಿದ್ದಾರೆ. 
 
ತಾನು ಕಷ್ಟಪಟ್ಟು ಬೆಳೆದಿರುವ ಉತ್ಪನ್ನಕ್ಕೆ ಬೆಲೆಯೇ ಸಿಗದ ನೋವಿನಲ್ಲಿ ರೈತ ಸರಕಿನೊಂದಿಗೆ ಮನೆಗೆ ಹಿಂತಿರುಗಿದ್ದಾನೆ.
 
ಬರದ ಪರಿಣಾದಿಂದಾಗಿ ಆಗಸ್ಟ್ 21, 2015ರಲ್ಲಿ ಈರುಳ್ಳಿ ಬೆಲೆ ಕ್ವಿಂಟಾಲ್‌ಗೆ 5824ಕ್ಕೆ ಏರಿತ್ತು. ಆಗ ರೈತರು ಪ್ರತಿ ಕೆಜಿಗೆ 54 ರೂಪಾಯಿಯನ್ನು ಪಡೆದಿದ್ದರು. ಈರುಳ್ಳಿ ಬೆಲೆ ಈ ಮಟ್ಟದಲ್ಲಿ ಏರಿದ್ದನ್ನು ಕಂಡ ರೈತರು ಈ ಬಾರಿ ಬೆಳೆಯಲು ಇದೇ ಬೆಳೆಯನ್ನು ಆಯ್ದುಕೊಂಡರು. 
 
ಇನ್ನೊಂದು ಕಾರಣವೇನೆಂದರೆ ಬರದ ಕಾರಣಕ್ಕೆ ಹಲವಾರು ರೈತರು ಕಬ್ಬಿನ ಬದಲಾಗಿ ಈರುಳ್ಳಿಯನ್ನೇ ಆಯ್ದುಕೊಂಡರು. ಆದರೆ ಈಗ ಅತಿರಿಕ್ತ ಉತ್ಪಾದನೆಯಿಂದಾಗಿ ಬೆಲೆಯೇ ಇಲ್ಲದಂತಾಗಿದೆ ಎಂದು ಪುಣೆ ಮೂಲದ ಕೃಷಿ ವಿಶ್ಲೇಷಕರಾದ ದೀಪಕ್ ಚವನ್ ಹೇಳುತ್ತಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

ಮುಂದಿನ ಸುದ್ದಿ
Show comments