Webdunia - Bharat's app for daily news and videos

Install App

ರಾಹುಲ್ ಸಭೆಯ ಬಳಿಕ ಮಂಚದೊಂದಿಗೆ ಮನೆಗೆ ತೆರಳಿದ ರೈತರು

Webdunia
ಬುಧವಾರ, 7 ಸೆಪ್ಟಂಬರ್ 2016 (17:47 IST)
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಉತ್ತರಪ್ರದೇಶದ ದಿಯೋರಿಯಾದಲ್ಲಿ ಖಾಟ್ ಸಭಾವನ್ನು ಅಂತ್ಯಗೊಳಿಸಿದ ಕೂಡಲೇ ಅನೇಕ ಮಂದಿ ರೈತರು ಮರದ ಮಂಚಗಳನ್ನು ಎತ್ತಿಕೊಂಡು ಸೀದಾ ಮನೆಯ ಹಾದಿ ಹಿಡಿದರು. ಮರದ ಮಂಚಗಳನ್ನು ಮನೆಗೆ ಒಯ್ಯುವುದಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರು ಮತ್ತು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಗೊಂದಲದ ಸ್ಥಿತಿ ಉಂಟಾಯಿತು.
 
 ಸಭೆ ಮುಗಿದ ಬಳಿಕ ಮಂಚವನ್ನು ಮನೆಗೆ ತೆಗೆದುಕೊಂಡುಹೋಗುವಂತೆ ಸ್ಥಳೀಯ ಕಾಂಗ್ರೆಸ್ ನಾಯಕರೊಬ್ಬರು ತಿಳಿಸಿದ್ದಾರೆಂದು ರಾಹುಲ್ ಕಾಟ್ ಸಭಾಗೆ ಭೇಟಿ ನೀಡಿದ ಗ್ರಾಮಸ್ಥರೊಬ್ಬರು ತಿಳಿಸಿದರು.
 
ಇನ್ನೊಬ್ಬ ರೈತ ಪರಿಸ್ಥಿತಿಯನ್ನು ಅಪಹಾಸ್ಯ ಮಾಡಿ, ''ಸಭಾ ಕತಮ್, ಕಾಟ್ ಖತಮ್'' ಎಂದು ಹೇಳಿದರು. ರಾಹುಲ್ ಮಂಗಳವಾರ ಉ.ಪ್ರದೇಶದ ರಾಜಕೀಯ ಪ್ರಾಮುಖ್ಯತೆಯ ರಾಜ್ಯದಲ್ಲಿ ಅಧಿಕಾರ ಹಿಡಿಯಲು ತಮ್ಮ ಉ.ಪ್ರದೇಶ ಅಭಿಯಾನವನ್ನು ರೈತರ ಜತೆ ಖಾಟ್ ಸಭಾದೊಂದಿಗೆ ಆರಂಭಿಸಿದ್ದರು.

ರೈತರನ್ನು ಭೇಟಿ ಮಾಡಿ 2017ರ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ತಂದರೆ ಸಾಲ ಮನ್ನಾ, ವಿದ್ಯುತ್ ದರದಲ್ಲಿ ಶೇ. 50ರಷ್ಟು ಕಡಿತ ಮುಂತಾದ ಆಮಿಷಗಳನ್ನು ರೈತರಿಗೆ ಒಡ್ಡಿದರು.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಆರೋಗ್ಯದಲ್ಲಿ ಚೇತರಿಕೆ: ಮಹಿಳೆಗೆ ಒತ್ತಡ, ದೂರು

ಏರ್‌ ಇಂಡಿಯಾ ದುರಂತದ ಬಳಿಕ ವಿಮಾನದಲ್ಲಿ ಈ ಸೀಟಿಗಾಗಿ ಹೆಚ್ಚಿದ ಬೇಡಿಕೆ

ಮುಂದಿನ ಸುದ್ದಿ
Show comments