Publish Date: Wed, 29 Jun 2022 (09:54 IST)
Updated Date: Wed, 29 Jun 2022 (09:58 IST)
ನವದೆಹಲಿ : ಬಿಜೆಪಿ ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಚುನಾವಣೆಯಲ್ಲಿ ಗೆಲ್ಲುವುದು ಬಹುತೇಕ ಖಚಿತವಾಗಿದೆ.
ಆದರೂ ವಿಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹ ಅವರು ತಮ್ಮ ಪ್ರಯತ್ನ ಮುಂದುವರಿಸಿದ್ದಾರೆ. ಪ್ರಬಲ ಅಭ್ಯರ್ಥಿಗಳ ನಡುವೆ ಪೈಟೋಟಿ ಏರ್ಪಟ್ಟಿರುವ ಹೊತ್ತಿನಲ್ಲಿ ರೈತರೊಬ್ಬರು ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸಿ ನಾಮಪತ್ರ ಸಲ್ಲಿಸಿದ್ದಾರೆ.
ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಿರುವ ಉತ್ತರ ಪ್ರದೇಶದ ಚಂದೌಲಿ ಜಿಲ್ಲೆಯ ರೈತ ವಿನೋದ್ ಕುಮಾರ್ ಯಾದವ್ ತನಗೆ ಹಲವು ಸಂಸದರು, ಶಾಸಕರು ಹಾಗೂ ಸಚಿವರ ಬೆಂಬಲ ಇರುವುದಾಗಿಯೂ ಅವರು ಹೇಳಿಕೊಂಡಿದ್ದಾರೆ.
10ನೇ ತರಗತಿ ವರೆಗೆ ಓದಿಕೊಂಡಿರುವ ವಿನೋದ್ ಕುಮಾರ್ ಕೃಷಿ ಚಟುವಟಿಕೆ ನಡೆಸುತ್ತಿದ್ದಾರೆ. ಇದರೊಂದಿಗೆ ರಾಜಕೀಯ ಚಟುವಟಿಕೆಗಳಲ್ಲೂ ತನ್ನನ್ನು ತಾನು ತೊಡಗಿಸಿಕೊಂಡಿದ್ದ ವಿನೋದ್ ಇದೀಗ ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸಿದ್ದಾರೆ.