Webdunia - Bharat's app for daily news and videos

Install App

ರೈತರು ಬೀಜ ಖರೀದಿಸಲು ಹಳೆಯ 500 ನೋಟು ಬಳಸಲು ಅವಕಾಶ: ಕೇಂದ್ರ ಸರಕಾರ

Webdunia
ಸೋಮವಾರ, 21 ನವೆಂಬರ್ 2016 (16:23 IST)
ದೇಶಾದ್ಯಂತ ನೋಟು ನಿಷೇಧದ ಬಿಸಿ ಮುಂದುವರಿದಿರುವಂತೆಯೇ ಕೇಂದ್ರ ಸರಕಾರ ರೈತರಿಗೆ ಅನುಕೂಲ ಮಾಡಿಕೊಡಲು ಹಳೆಯ 500 ರೂ.ನೋಟುಗಳನ್ನು ಬೀಜಗಳ ಖರೀದಿಗಾಗಿ ಬಳಸಲು ಅವಕಾಶ ನೀಡಿ ಆದೇಶ ಹೊರಡಿಸಿದೆ.
 
ಕೇಂದ್ರ ಮತ್ತು ರಾಜ್ಯ ಸರಕಾರಗಳ ಆಧೀನದಲ್ಲಿರುವ ಬೀಜ ಖರೀದಿ ಕೇಂದ್ರಗಳಲ್ಲಿ ರೈತರು ಹಳೆಯ 500 ರೂಪಾಯಿ ನೋಟುಗಳನ್ನು ನೀಡಿ ಬೀಜ ಖರೀದಿಸಬಹುದು. ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಇಂತಹ ಕ್ರಮ ಕೈಗೊಳ್ಳಲಾಗಿದೆ ಎಂದು ವಿತ್ತ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
 
ರೈತರು ವಾರಕ್ಕೆ 25 ಸಾವಿರ ರೂಪಾಯಿಗಳನ್ನು ಬ್ಯಾಂಕ್‌ನಿಂದ ಹಿಂಪಡೆಯಬಹುದು ಎನ್ನುವ ಆದೇಶದ ನಂತರ, ಇದೀಗ ಹಳೆಯ ನೋಟುಗಳನ್ನು ಬಳಸುವಂತೆ  ರೈತರ ಪರವಾಗಿ ಕೇಂದ್ರ ಸರಕಾರ ಮತ್ತೊಂದು ಆದೇಶ ನೀಡಿದೆ.
 
ಅದನ್ನು ಹೊರತುಪಡಿಸಿ, ರೈತರು ಬೆಳೆ ವಿಮೆ ಕಂತಿನ ಗಡುವನ್ನು 15 ದಿನಗಳಿಗೆ ವಿಸ್ತರಿಸಿ ಕೇಂದ್ರ ಸರಕಾರ ಆದೇಶ ಹೊರಡಿಸಿದ್ದಲ್ಲದೇ ಎಪಿಎಂಸಿ ನೋಂದಾಯಿತ ವರ್ತಕರು ವಾರಕ್ಕೆ 50 ಸಾವಿರ ರೂಪಾಯಿಗಳನ್ನು ಬ್ಯಾಂಕ್‌ ಖಾತೆಯಿಂದ ಪಡೆಯಬಹುದಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments