Webdunia - Bharat's app for daily news and videos

Install App

ಅಧಿಕಾರಿಗಳ ಲಂಚದ ದಾಹಕ್ಕೆ ಬೇಸತ್ತು ಬೆಂಕಿ ಹಚ್ಚಿಕೊಂಡ ರೈತರು..!

Webdunia
ಸೋಮವಾರ, 4 ಸೆಪ್ಟಂಬರ್ 2017 (17:45 IST)
ಕಂದಾಯ ಇಲಾಖೆ ಅಧಿಕಾರಿಗಳ ಭ್ರಷ್ಟಾಚಾರದಿಂದ ಬೇಸತ್ತ ರೈತರಿಬ್ಬರು ಟಿಆರ್`ಎಸ್ ಶಾಸಕನ ಕಚೇರಿ ಮುಂದೆಯೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತೆಲಂಗಾಣ ರಾಜ್ಯದ ಕರೀಂನಗರದಲ್ಲಿ ನಡೆದಿದೆ.
 

ಟಿಆರ್`ಎಸ್ ಶಾಸಕ ರಸಮಾಯಿ ಬಾಲಕೃಷ್ಣನ್ ಕಚೇರಿ ಮುಂದೆ ಈ ಘಟನೆ ನಡೆದಿದೆ. 25 ವರ್ಷದ ಶ್ರೀನಿವಾಸ್ ಮತ್ತು 23 ವರ್ಷದ ಪರಶುರಾಮುಲು ಆತ್ಮಹತ್ಯೆಗೆ ಯತ್ನಿಸಿದ ರೈತರು. ಗಂಭೀರ ಗಾಯಗೊಂಡಿರುವ ಇಬ್ಬರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ರೈತರಾದ ಶ್ರೀನಿವಾಸ್ ಮತ್ತು ಪರಶುರಾಮ್ ಬಡ ರೈತರ ಅನುಕೂಲಕ್ಕಾಗಿ ಇರುವ ಯೋಜನೆಯೊಂದರ ಅನುಕೂಲ ಪಡೆಯಲು ಸ್ಥಳೀಯ ಕಂದಾಯ ಇಲಾಖೆ ಕಚೇರಿಗೆ ತೆರಳಿದ್ದಾರೆ.ಆದರೆ, ಅಲ್ಲಿನ ಅಧಿಕಾರಿ ಕೆಲಸ ಮಾಡಿಕೊಡಲು  20,000 ರೂ. ಲಂಚದ ಬೇಡಿಕೆ ಇಟ್ಟಿದ್ದಾನೆ. ಇದರಿಂದ ನೊಂದ ರೈತರು ಬೆಳಗ್ಗೆಯಿಂದ ಸಂಜೆವರೆಗೆ ಶಾಸಕರಿಗಾಗಿ ಕಚೇರಿ ಮುಂದೆ ಕಾದಿದ್ದಾರೆ. ಎಷ್ಟೆ ಕಾದರೂ ಶಾಸಕರು ಸಿಗದಿದ್ದಾಗ ನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ನಾವು ಬೆಳಗ್ಗೆ 10 ಗಂಟೆಯಿಂದ 3.300ರವರೆಗೂ ಕಾದರೂ ಶಾಸಕರು ಬರಲಿಲ್ಲ. ಾದರೆ, ಬಳಿಕ ಶಾಸಕರ ಜೊತೆ ಸಭೆ ನಡೆಸದೇ ನಮ್ಮನ್ನ ತೆರಳಲು ಸೂಚಿಸಿದರು. ದಾರಿಕಾಣದೇ ಆತ್ಮಹತ್ಯೆಗೆ ಯತ್ನಿಸಿದ್ದಾಗಿ ರೈತರು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments