Webdunia - Bharat's app for daily news and videos

Install App

ರೈತರ ಮನಸ್ಸಿನಲ್ಲಿ ಭಯ, ದುಗುಡು ಆವರಿಸಿದೆ: ರಾಹುಲ್

Webdunia
ಭಾನುವಾರ, 19 ಏಪ್ರಿಲ್ 2015 (12:30 IST)
ಹಲವು ದಿನಗಳಿಂದ ಕಣ್ಮರೆಯಾಗಿದ್ದ ರಾಹುಲ್ ಗಾಂಧಿ ದಿಢೀರ್ ಪ್ರತ್ಯಕ್ಷರಾಗಿ  ಕೇಂದ್ರ ಸರ್ಕಾರದ ಭೂಸ್ವಾಧೀನ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್  ಬಹಿರಂಗ ರಾಲಿಯಲ್ಲಿ ಇಂದು ಭಾಗವಹಿಸಿದರು.  ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಸೋನಿಯಾ ಗಾಂಧಿ, ಕಾಂಗ್ರೆಸ್ ಗಣ್ಯರು  ರಾಲಿಯಲ್ಲಿ ಭಾಗವಹಿಸಿದ್ದರು.  ಮನಮೋಹನ್ ಸಿಂಗ್ ರಾಲಿಯಲ್ಲಿ  ಮಾತನಾಡಿ ಭೂಸ್ವಾಧೀನ ಕಾಯ್ದೆಯ ವಿರುದ್ಧ ರೈತರಲ್ಲಿ ಜಾಗೃತಿ ಮೂಡಿಸಿದರು.

ಯಾವುದೇ ಕಾರಣಕ್ಕೂ ವಿಧೇಯಕ ಜಾರಿಯಾಗಬಾರದು. ರೈತರ ಪರವಾಗಿ ಕಾಂಗ್ರೆಸ್ ಪಕ್ಷ ನಿಲ್ಲಲಿದೆ. ಭೂಸ್ವಾಧೀನ ಕಾಯ್ದೆಯನ್ನು ಶತಾಯಗತಾಯ ವಿರೋಧಿಸಿ ಎಂದು ಸಿಂಗ್ ರೈತರಿಗೆ ಕರೆ ನೀಡಿದರು.

ನಂತರ ಮಾತನಾಡಿದ ರಾಹುಲ್ ಗಾಂಧಿ ಭಾರತ ಸರ್ಕಾರ ರೈತರನ್ನು ಮರೆತಿದೆ ಎಂಬ ಭಾವನೆ ಇದೆ. ನಮ್ಮ ದೇಶದ ರೈತರು ತುಂಬಾ ತೊಂದರೆ ಎದುರಿಸುತ್ತಿದ್ದಾರೆ. ದೇಶದ ಉದ್ಯಮಗಳ ಪರವಾಗಿ ಸರ್ಕಾರ ಕೆಲಸ ಮಾಡುತ್ತಿದೆ. ರೈತರ ರಕ್ತದಿಂದ ನಮ್ಮ ದೇಶವನ್ನು ಕಟ್ಟಲಾಗಿದೆ. ಆದರೆ ಅವರ ಜಮೀನನ್ನು ಕಸಿದುಕೊಳ್ಳಲು ಸರ್ಕಾರ ಮುಂದಾಗಿದೆ ಎಂದು ರಾಹುಲ್ ಹೇಳಿದರು.    ರಾತ್ರಿ ಮಲಗಿ ಬೆಳಗಾಗುವುದರಲ್ಲಿ ಏನಾಗುತ್ತೋ ಗೊತ್ತಿಲ್ಲ, ಎಲ್ಲಿ ಯಾರು ಜಮೀನು ಕಸಿದುಕೊಳ್ಳುತ್ತಾರೋ ಗೊತ್ತಿಲ್ಲ. ಅಂತಹ ಭಯ, ದುಗುಡ ರೈತರನ್ನು ಆವರಿಸಿದೆ  ಎಂದು ರಾಹುಲ್ ಹೇಳಿದರು.  ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡ ಸಮಾವೇಶದಲ್ಲಿ  ಉಪಸ್ಥಿತರಿದ್ದರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments