ಸಾಲಮನ್ನಾ ವಿಚಾರದಲ್ಲಿ ರೈತರ ಭರವಸೆ ಹುಸಿ ಮಾಡಿದ ಕೇಂದ್ರ ಸರ್ಕಾರ

Webdunia
ಗುರುವಾರ, 13 ಡಿಸೆಂಬರ್ 2018 (14:52 IST)
ನವದೆಹಲಿ : ಸಾಲಮನ್ನಾ ವಿಚಾರದಲ್ಲಿ ಕೇಂದ್ರ ಸರ್ಕಾರದಿಂದ ಸಿಹಿಸುದ್ಧಿ ಸಿಗುವುದಾಗಿ ಭರವಸೆಯಲ್ಲಿದ್ದ ರೈತರಿಗೆ ಇದೀಗ ಮೋದಿ ಸರ್ಕಾರ ನಿರಾಸೆ ಮೂಡಿಸಿದೆ.


ಹೌದು. ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಭಾರೀ ಹಿನ್ನಡೆ ಸಾಧಿಸಿದ ಹಿನ್ನಲೆಯಲ್ಲಿ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ರೈತರ ಸಾಲಮನ್ನಾ ಮಾಡುವ ನಿರ್ಧಾರ ಮಾಡಬಹುದೆಂದು ಭಾವಿಸಲಾಗಿತ್ತು. ಆದರೆ ಅದೀಗ ಹುಸಿಯಾಗಿದೆ.


ಈ ಬಗ್ಗೆ ಲೋಕಸಭಾ ಸದನದಲ್ಲಿ ಲಿಖಿತ ರೂಪದಲ್ಲಿ ಸ್ಪಷ್ಟನೆ ನೀಡಿದ ಕೇಂದ್ರ ಕೃಷಿ ಖಾತೆಯ ರಾಜ್ಯ ಸಚಿವ ಪುರುಷೋತ್ತಮ್ ರೂಪಾಲಾ,’ಸರ್ಕಾರ ರೈತರ ಆದಾಯ ಹೆಚ್ಚಿಸಲು ಬೇಕಾದ ಕ್ರಮಗಳನ್ನು ಕೈಗೊಳ್ಳುತ್ತಿದೆ. ಅದ್ದರಿಂದ ರೈತರ ಸಾಲಮನ್ನಾ ಮಾಡುವುದು ದೇಶದ ಆರ್ಥಿಕತೆಗೆ ಒಳ್ಳೆಯದಲ್ಲ. ಇದರಿಂದ ಬ್ಯಾಂಕ್‍ಗಳ ಮೇಲಿನ ಹೊರೆಯೂ ಹೆಚ್ಚಾಗುತ್ತದೆ. ಹೀಗಾಗಿ ರೈತರ ಸಾಲಮನ್ನಾ ಮಾಡುವ ಉದ್ದೇಶ ಕೇಂದ್ರ ಸರ್ಕಾರಕ್ಕೆ ಇಲ್ಲ’ ಎಂದು ಸ್ಪಷ್ಟ ಪಡಿಸಿದ್ದಾರೆ.


‘ರೈತರ ಸಾಲಮನ್ನಾ ಮಾಡಿದರೆ ಅವರು ಅದನ್ನೇ ಅಭ್ಯಾಸ ಮಾಡಿಕೊಳ್ಳುತ್ತಾರೆ. ಮತ್ತೆ ಮತ್ತೆ ಸಾಲಮನ್ನಾ ಮಾಡಲು ಬೇಡಿಕೆ ಹೆಚ್ಚಾಗುತ್ತದೆ. ಮುಂದಿನ ದಿನಗಳಲ್ಲಿ ಈ ರೀತಿಯ ಬೇಡಿಕೆಯನ್ನು ತಿರಸ್ಕರಿಸುವುದು ಕಷ್ಟವಾಗುತ್ತದೆ. ಅಷ್ಟೇ ಅಲ್ಲದೇ ಇದರಿಂದಾಗಿ ಬ್ಯಾಂಕ್ ಮೇಲಿನ ಒತ್ತಡ ಹೆಚ್ಚಾಗುತ್ತದೆ’ ಎಂದು ಅವರು  ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments