Webdunia - Bharat's app for daily news and videos

Install App

ಪ್ರತಿಭಟನಾ ನಿರತ ರೈತರು ಗೂಂಡಾಗಳು: ಕೇಂದ್ರ ಸಚಿವೆ ಲೇಖಿ ವಿವಾದಾತ್ಮಕ ಹೇಳಿಕೆ

Webdunia
ಗುರುವಾರ, 22 ಜುಲೈ 2021 (19:58 IST)
ರಾಜಧಾನಿ ದೆಹಲಿಯ ಜಂತರ್ ಮಂಥರ್ ನಲ್ಲಿ ಮಾಧ್ಯಮ ಸಿಬ್ಬಂದಿ ಮೇಲೆ ದಾಳಿ ಆರೋಪ ಕುರಿತು ಪ್ರತಿಕ್ರಿಯಿಸಿದ ಸಚಿವೆ, ಪ್ರತಿಪಕ್ಷಗಳು ಇಂತಹ ಚಟುವಟಿಕೆಗಳನ್ನು ಪ್ರಚೋದಿಸುತ್ತಿವೆ ಎಂದು ಆರೋಪಿಸಿದರು.
ಪ್ರತಿಭಟನೆ ನಡೆಸುತ್ತಿರುವವರು ರೈತರಲ್ಲ, ಗೂಂಡಾಗಳು, ಇವುಗಳು ಅಪರಾಧ ಚಟುವಟಿಕೆಗಳಾಗಿವೆ, ಜನವರಿ 26 ರಂದು ಸಂಭವಿಸಿದ ಘಟನೆಗಳು ಕೂಡಾ ನಾಚಿಕೆಗೇಡಿನ ಅಪರಾಧ ಚಟುವಟಿಕೆಗಳಾಗಿವೆ. ಇಂತಹ ಚಟುವಟಿಕೆಗಳನ್ನು ಪ್ರತಿಪಕ್ಷಗಳು ಪ್ರಚೋದಿಸುತ್ತಿವೆ ಎಂದರು.
ಮೀನಾಕ್ಷಿ ಲೇಖಿ ವಿರುದ್ಧ ವಾಗ್ದಾಳಿ ನಡೆಸಿರುವ ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್, ರೈತರು ಅನ್ನದಾತರು, ಅವರನ್ನು ಗೂಂಡಾಗಳು ಅಂತ ಹೆಸರಿನಿಂದ ಕರೆದಿರುವುದು ಸರಿಯಾಗಿಲ್ಲ. ನಾವು ರೈತರು, ಗೂಂಡಾಗಳಲ್ಲ, ರೈತರು ನೆಲದ ಅನ್ನದಾತರು ಎಂದು ಹೇಳಿದರು.
ಮೀನಾಕ್ಷಿ ಲೇಖಿ ನೀಡಿರುವ ಹೇಳಿಕೆ ದೇಶದ 80 ಕೋಟಿ ರೈತರಿಗೆ ಅಪಮಾನ ಮಾಡಿದೆ. ನಾವು ಗೂಂಡಾಗಳಾದರೆ, ನಾವು ಬೆಳೆದ ಆಹಾರ ಧಾನ್ಯ ತಿನ್ನುವುದನ್ನು ಮೀನಾಕ್ಷಿ ಲೇಖಿ ನಿಲ್ಲಿಸಬೇಕು. ಅವರಿಗೆ ನಾಚಿಕೆಯಾಗಬೇಕು, ಆಕೆಯ ಹೇಳಿಕೆ ಖಂಡಿಸಿ ರೈತರ ಸಂಸತ್ತಿನಲ್ಲಿ ನಿರ್ಣಯ ಅಂಗೀಕರಿಸಲಾಗಿದೆ ಎಂದು ರೈತ ಮುಖಂಡ ಶಿವ ಕುಮಾರ್ ಕಕ್ಕಾ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

Bengaluru Stampede: KSCAಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

B Dayanand Suspend: ಸಿಎಂಗೆ ಸಾಲು ಸಾಲು ಪ್ರಶ್ನೆ ಕೇಳಿದ ಪ್ರತಾಪ್ ಸಿಂಹ

UP Encounter: 3 ವರ್ಷದ ಬಾಲಕಿಯನ್ನು ರೇಪ್ ಮಾಡಿದ ಆರೋಪಿ ಯುಪಿ ಪೊಲೀಸರಿಂದ ಎನ್ ಕೌಂಟರ್

ಮುಂದಿನ ಸುದ್ದಿ
Show comments