Webdunia - Bharat's app for daily news and videos

Install App

ಪ್ರತಿಭಟನಾ ನಿರತ ರೈತರು ಗೂಂಡಾಗಳು: ಕೇಂದ್ರ ಸಚಿವೆ ಲೇಖಿ ವಿವಾದಾತ್ಮಕ ಹೇಳಿಕೆ

Webdunia
ಗುರುವಾರ, 22 ಜುಲೈ 2021 (19:58 IST)
ರಾಜಧಾನಿ ದೆಹಲಿಯ ಜಂತರ್ ಮಂಥರ್ ನಲ್ಲಿ ಮಾಧ್ಯಮ ಸಿಬ್ಬಂದಿ ಮೇಲೆ ದಾಳಿ ಆರೋಪ ಕುರಿತು ಪ್ರತಿಕ್ರಿಯಿಸಿದ ಸಚಿವೆ, ಪ್ರತಿಪಕ್ಷಗಳು ಇಂತಹ ಚಟುವಟಿಕೆಗಳನ್ನು ಪ್ರಚೋದಿಸುತ್ತಿವೆ ಎಂದು ಆರೋಪಿಸಿದರು.
ಪ್ರತಿಭಟನೆ ನಡೆಸುತ್ತಿರುವವರು ರೈತರಲ್ಲ, ಗೂಂಡಾಗಳು, ಇವುಗಳು ಅಪರಾಧ ಚಟುವಟಿಕೆಗಳಾಗಿವೆ, ಜನವರಿ 26 ರಂದು ಸಂಭವಿಸಿದ ಘಟನೆಗಳು ಕೂಡಾ ನಾಚಿಕೆಗೇಡಿನ ಅಪರಾಧ ಚಟುವಟಿಕೆಗಳಾಗಿವೆ. ಇಂತಹ ಚಟುವಟಿಕೆಗಳನ್ನು ಪ್ರತಿಪಕ್ಷಗಳು ಪ್ರಚೋದಿಸುತ್ತಿವೆ ಎಂದರು.
ಮೀನಾಕ್ಷಿ ಲೇಖಿ ವಿರುದ್ಧ ವಾಗ್ದಾಳಿ ನಡೆಸಿರುವ ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್, ರೈತರು ಅನ್ನದಾತರು, ಅವರನ್ನು ಗೂಂಡಾಗಳು ಅಂತ ಹೆಸರಿನಿಂದ ಕರೆದಿರುವುದು ಸರಿಯಾಗಿಲ್ಲ. ನಾವು ರೈತರು, ಗೂಂಡಾಗಳಲ್ಲ, ರೈತರು ನೆಲದ ಅನ್ನದಾತರು ಎಂದು ಹೇಳಿದರು.
ಮೀನಾಕ್ಷಿ ಲೇಖಿ ನೀಡಿರುವ ಹೇಳಿಕೆ ದೇಶದ 80 ಕೋಟಿ ರೈತರಿಗೆ ಅಪಮಾನ ಮಾಡಿದೆ. ನಾವು ಗೂಂಡಾಗಳಾದರೆ, ನಾವು ಬೆಳೆದ ಆಹಾರ ಧಾನ್ಯ ತಿನ್ನುವುದನ್ನು ಮೀನಾಕ್ಷಿ ಲೇಖಿ ನಿಲ್ಲಿಸಬೇಕು. ಅವರಿಗೆ ನಾಚಿಕೆಯಾಗಬೇಕು, ಆಕೆಯ ಹೇಳಿಕೆ ಖಂಡಿಸಿ ರೈತರ ಸಂಸತ್ತಿನಲ್ಲಿ ನಿರ್ಣಯ ಅಂಗೀಕರಿಸಲಾಗಿದೆ ಎಂದು ರೈತ ಮುಖಂಡ ಶಿವ ಕುಮಾರ್ ಕಕ್ಕಾ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments