ಪ್ರತಿಭಟನಾ ನಿರತ ರೈತರು ಗೂಂಡಾಗಳು: ಕೇಂದ್ರ ಸಚಿವೆ ಲೇಖಿ ವಿವಾದಾತ್ಮಕ ಹೇಳಿಕೆ

Webdunia
ಗುರುವಾರ, 22 ಜುಲೈ 2021 (19:58 IST)
ರಾಜಧಾನಿ ದೆಹಲಿಯ ಜಂತರ್ ಮಂಥರ್ ನಲ್ಲಿ ಮಾಧ್ಯಮ ಸಿಬ್ಬಂದಿ ಮೇಲೆ ದಾಳಿ ಆರೋಪ ಕುರಿತು ಪ್ರತಿಕ್ರಿಯಿಸಿದ ಸಚಿವೆ, ಪ್ರತಿಪಕ್ಷಗಳು ಇಂತಹ ಚಟುವಟಿಕೆಗಳನ್ನು ಪ್ರಚೋದಿಸುತ್ತಿವೆ ಎಂದು ಆರೋಪಿಸಿದರು.
ಪ್ರತಿಭಟನೆ ನಡೆಸುತ್ತಿರುವವರು ರೈತರಲ್ಲ, ಗೂಂಡಾಗಳು, ಇವುಗಳು ಅಪರಾಧ ಚಟುವಟಿಕೆಗಳಾಗಿವೆ, ಜನವರಿ 26 ರಂದು ಸಂಭವಿಸಿದ ಘಟನೆಗಳು ಕೂಡಾ ನಾಚಿಕೆಗೇಡಿನ ಅಪರಾಧ ಚಟುವಟಿಕೆಗಳಾಗಿವೆ. ಇಂತಹ ಚಟುವಟಿಕೆಗಳನ್ನು ಪ್ರತಿಪಕ್ಷಗಳು ಪ್ರಚೋದಿಸುತ್ತಿವೆ ಎಂದರು.
ಮೀನಾಕ್ಷಿ ಲೇಖಿ ವಿರುದ್ಧ ವಾಗ್ದಾಳಿ ನಡೆಸಿರುವ ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್, ರೈತರು ಅನ್ನದಾತರು, ಅವರನ್ನು ಗೂಂಡಾಗಳು ಅಂತ ಹೆಸರಿನಿಂದ ಕರೆದಿರುವುದು ಸರಿಯಾಗಿಲ್ಲ. ನಾವು ರೈತರು, ಗೂಂಡಾಗಳಲ್ಲ, ರೈತರು ನೆಲದ ಅನ್ನದಾತರು ಎಂದು ಹೇಳಿದರು.
ಮೀನಾಕ್ಷಿ ಲೇಖಿ ನೀಡಿರುವ ಹೇಳಿಕೆ ದೇಶದ 80 ಕೋಟಿ ರೈತರಿಗೆ ಅಪಮಾನ ಮಾಡಿದೆ. ನಾವು ಗೂಂಡಾಗಳಾದರೆ, ನಾವು ಬೆಳೆದ ಆಹಾರ ಧಾನ್ಯ ತಿನ್ನುವುದನ್ನು ಮೀನಾಕ್ಷಿ ಲೇಖಿ ನಿಲ್ಲಿಸಬೇಕು. ಅವರಿಗೆ ನಾಚಿಕೆಯಾಗಬೇಕು, ಆಕೆಯ ಹೇಳಿಕೆ ಖಂಡಿಸಿ ರೈತರ ಸಂಸತ್ತಿನಲ್ಲಿ ನಿರ್ಣಯ ಅಂಗೀಕರಿಸಲಾಗಿದೆ ಎಂದು ರೈತ ಮುಖಂಡ ಶಿವ ಕುಮಾರ್ ಕಕ್ಕಾ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

Video: ಇರುಮುಡಿ ಹೊತ್ತು ಶಬರಿಮಲೆ 18 ಮೆಟ್ಟಿಲು ಹತ್ತಿದ ರಾಷ್ಟ್ರಪತಿ ದ್ರೌಪದಿ ಮುರ್ಮು: ಹೊಸ ದಾಖಲೆ

ಆರ್ ಎಸ್ಎಸ್ ನಲ್ಲಿದ್ದ ಅಶೋಕ್ ರೈ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದು ಯಾಕೆ: ಅವರೇ ಹೇಳಿದ್ದು ಹೀಗೆ

ಅಪ್ಪ ಅನಂತ್ ಕುಮಾರ್ ಸುದ್ದಿಗೆ ಬಂದಿದ್ದಕ್ಕೆ ಪ್ರಿಯಾಂಕ್ ಖರ್ಗೆಗೆ ಬೆಂಡೆತ್ತಿದ ಪುತ್ರಿ ಐಶ್ವರ್ಯಾ

ಬಾಡೂಟ ತಿಂದ ಬಳಿಕ ನಿಮ್ಮ ಡಯಟ್ ಹೀಗಿರಬೇಕು

ಮುಂದಿನ ಸುದ್ದಿ
Show comments