Webdunia - Bharat's app for daily news and videos

Install App

ಅಳಿಯನ ಕಿರುಕುಳಕ್ಕೆ ತಂದೆ ಮಗಳು ಬಲಿ

Webdunia
ಶನಿವಾರ, 27 ಫೆಬ್ರವರಿ 2016 (11:21 IST)
ತವರಿನ ಆಸ್ತಿಯಲ್ಲಿ ಪಾಲು ಬೇಕೆಂದು ಗಂಡ ನಿರಂತರವಾಗಿ ಕಿರುಕುಳ ನೀಡುತ್ತಿದ್ದರಿಂದ ನೊಂದ ಪತ್ನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಮೈಸೂರಿನ ರಾಮಕೃಷ್ಣನಗರದಲ್ಲಿ ನಡೆದಿದೆ. ಇದೇ ಕಾರಣಕ್ಕೆ ಆಕೆಯ ತಂದೆ ಕೂಡ ಕಳೆದ ನಾಲ್ಕು ತಿಂಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ.
 
ಮೃತಳನ್ನು 25 ವರ್ಷದ ಭ್ರಮರಾಂಭಿಕ (25) ಎಂದು ಗುರುತಿಸಲಾಗಿದೆ.
 
ಆರೋಪಿ ನಿರಂಜನ್ (34)ಆಸ್ತಿಯಲ್ಲಿ ಪಾಲಿಗಾಗಿ ಪತ್ನಿಯ ತಂದೆ ಮಹದೇವಪ್ಪ ಅವರ ಮೇಲೆ ಒತ್ತಡ ಹೇರುತ್ತಿದ್ದ ಎನ್ನಲಾಗಿದೆ. ಆತನ ಕಾಟ ತಾಳಲಾರದೆ ಮಹದೇವಪ್ಪ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೀಗಾಗಿ ನಿರಂಜನ್ ಕಾಟ ತಾಳಲಾರದೆ ಮಹದೇವಪ್ಪ ನಾಲ್ಕು ತಿಂಗಳ ಹಿಂದೆ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದರು. ಈಗ ಮಗಳು ಕೂಡ ತಂದೆಯನ್ನೇ ಅನುಸರಿಸಿದ್ದಾಳೆ.  
 
ಪತ್ನಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಂತೆ ಆರೋಪಿ ನಿರಂಜನ್ ಮತ್ತು ಆತನ ತಾಯಿ ತಲೆ ಮರೆಸಿಕೊಂಡಿದ್ದಾರೆ. 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments