Publish Date: Mon, 04 Jul 2022 (15:54 IST)
Updated Date: Mon, 04 Jul 2022 (16:56 IST)
ಪಾಟ್ನಾ : ಅನ್ಯ ಜಾತಿಯ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಕ್ಕೆ ಮಗಳನ್ನು ಕೊಲ್ಲಲು ದುಷ್ಕರ್ಮಿಗಳಿಗೆ ಸುಪಾರಿ ನೀಡಿದ್ದ ಬಿಹಾರದ ಮಾಜಿ ಶಾಸಕನೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಮರ್ಯಾದಾ ಹತ್ಯೆ ನಡೆಸಲು ಮಾಜಿ ಶಾಸಕ ಸುರೇಂದ್ರ ಶರ್ಮಾ ಅವರು 20 ಲಕ್ಷ ರೂ. ನೀಡಿರುವುದಾಗಿ ಸುಪಾರಿ ಕಿಲ್ಲರ್ಸ್ ಸತ್ಯ ಬಾಯ್ಬಿಟ್ಟ ಹಿನ್ನೆಲೆ ಇದೀಗ ಸುರೇಂದ್ರ ಶರ್ಮಾರನ್ನು ಬಂಧಿಸಿರುವುದಾಗಿ ಪಾಟ್ನಾದ ಹಿರಿಯ ಪೊಲೀಸ್ ಅಧಿಕಾರಿ ಪ್ರಮೋದ್ ಕುಮಾರ್ ಹೇಳಿದ್ದಾರೆ.
ಶ್ರೀ ಕೃಷ್ಣ ಪುರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಸುರೇಂದ್ರ ಶರ್ಮಾ ಮಗಳನ್ನು ಜುಲೈ 1 ಮತ್ತು 2ನೇ ತಾರೀಖು ಮಧ್ಯರಾತ್ರಿ ಕೊಲೆ ಮಾಡಲು ಸುಪಾರಿ ಕಿಲ್ಲರ್ಸ್ ಯತ್ನಿಸಿದ್ದರು. ಆದರೆ ಈ ವೇಳೆ ಗುರಿ ತಪ್ಪಿ ಅಪರಿಚಿತ ವ್ಯಕ್ತಿ ಮೇಲೆ ಗುಂಡು ಹಾರಿಸಿ ಸ್ಥಳದಿಂದ ಎಸ್ಕೇಪ್ ಆಗಿದ್ದರು.
ನಂತರ ಈ ವಿಚಾರವಾಗಿ ಸುರೇಂದ್ರ ಶರ್ಮಾ ಅವರ ಮಗಳು ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ಈ ಬಗ್ಗೆ ಶೋಧ ಕಾರ್ಯ ಆರಂಭಿಸಿದ ಪೊಲೀಸರು, ಶನಿವಾರದಂದು ಗ್ಯಾಂಗ್ನ ಮುಖ್ಯಸ್ಥ ಅಭಿಷೇಕ್ ಅಲಿಯಾಸ್ ಛೋಟೆ ಸರ್ಕಾರ್ ಮತ್ತು ಆತನ ಇಬ್ಬರು ಸಹಚರರನ್ನು ಬಂಧಿಸಿದ್ದಾರೆ.