Webdunia - Bharat's app for daily news and videos

Install App

ಮಗಳನ್ನೇ ಸಾಯಿಸಲು ಸುಪಾರಿ ಕೊಟ್ಟ ತಂದೆ!

Webdunia
ಸೋಮವಾರ, 4 ಜುಲೈ 2022 (15:54 IST)
ಪಾಟ್ನಾ : ಅನ್ಯ ಜಾತಿಯ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಕ್ಕೆ ಮಗಳನ್ನು ಕೊಲ್ಲಲು ದುಷ್ಕರ್ಮಿಗಳಿಗೆ ಸುಪಾರಿ ನೀಡಿದ್ದ ಬಿಹಾರದ ಮಾಜಿ ಶಾಸಕನೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಮರ್ಯಾದಾ ಹತ್ಯೆ ನಡೆಸಲು ಮಾಜಿ ಶಾಸಕ ಸುರೇಂದ್ರ ಶರ್ಮಾ ಅವರು 20 ಲಕ್ಷ ರೂ. ನೀಡಿರುವುದಾಗಿ ಸುಪಾರಿ ಕಿಲ್ಲರ್ಸ್ ಸತ್ಯ ಬಾಯ್ಬಿಟ್ಟ ಹಿನ್ನೆಲೆ ಇದೀಗ ಸುರೇಂದ್ರ ಶರ್ಮಾರನ್ನು ಬಂಧಿಸಿರುವುದಾಗಿ ಪಾಟ್ನಾದ ಹಿರಿಯ ಪೊಲೀಸ್ ಅಧಿಕಾರಿ ಪ್ರಮೋದ್ ಕುಮಾರ್ ಹೇಳಿದ್ದಾರೆ. 

ಶ್ರೀ ಕೃಷ್ಣ ಪುರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಸುರೇಂದ್ರ ಶರ್ಮಾ ಮಗಳನ್ನು ಜುಲೈ 1 ಮತ್ತು 2ನೇ ತಾರೀಖು ಮಧ್ಯರಾತ್ರಿ ಕೊಲೆ ಮಾಡಲು ಸುಪಾರಿ ಕಿಲ್ಲರ್ಸ್ ಯತ್ನಿಸಿದ್ದರು. ಆದರೆ ಈ ವೇಳೆ ಗುರಿ ತಪ್ಪಿ ಅಪರಿಚಿತ ವ್ಯಕ್ತಿ ಮೇಲೆ ಗುಂಡು ಹಾರಿಸಿ ಸ್ಥಳದಿಂದ ಎಸ್ಕೇಪ್ ಆಗಿದ್ದರು.

ನಂತರ ಈ ವಿಚಾರವಾಗಿ ಸುರೇಂದ್ರ ಶರ್ಮಾ ಅವರ ಮಗಳು ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ಈ ಬಗ್ಗೆ ಶೋಧ ಕಾರ್ಯ ಆರಂಭಿಸಿದ ಪೊಲೀಸರು, ಶನಿವಾರದಂದು ಗ್ಯಾಂಗ್ನ ಮುಖ್ಯಸ್ಥ ಅಭಿಷೇಕ್ ಅಲಿಯಾಸ್ ಛೋಟೆ ಸರ್ಕಾರ್ ಮತ್ತು ಆತನ ಇಬ್ಬರು ಸಹಚರರನ್ನು ಬಂಧಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ದೆಹಲಿ ಸಿಎಂ ರೇಖಾ ಗುಪ್ತಾ ಕೊಲ್ಲುವುದಾಗಿ ಬೆದರಿಕೆ: ವ್ಯಕ್ತಿ ಅರೆಸ್ಟ್‌

ಮುಂದಿನ ಸುದ್ದಿ
Show comments