Webdunia - Bharat's app for daily news and videos

Install App

ತಂದೆಯ ಅಂತ್ಯ ಕ್ರಿಯೆ: ಅವಕಾಶ ಕೋರಿದ ಜೈಲಿನಲ್ಲಿರುವ ಮಗ ಅಬ್ಬಾಸ್ ಅನ್ಸಾರಿ

Sampriya
ಶುಕ್ರವಾರ, 29 ಮಾರ್ಚ್ 2024 (21:05 IST)
Photo Courtesy
ನವದೆಹಲಿ:  ಪ್ರಸ್ತುತ ಕಾಸ್ಗಂಜ್ ಜೈಲಿನಲ್ಲಿರುವ ಮೃತ ಮುಖ್ತಾರ್ ಅನ್ಸಾರಿ ಅವರ ಪುತ್ರ ಅಬ್ಬಾಸ್ ಅನ್ಸಾರಿ ಅವರು ತಮ್ಮ ತಂದೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಅನುಮತಿ ಕೋರಿ ಸುಪ್ರೀಂ ಕೋರ್ಟ್‌ನ ಮೊರೆ ಹೋಗಿದ್ದಾರೆ.

ಅಬ್ಬಾಸ್ ಅನ್ಸಾರಿ ಉತ್ತರ ಪ್ರದೇಶದ ಮೌ ಕ್ಷೇತ್ರದ ಶಾಸಕರಾಗಿದ್ದಾರೆ. ಇನ್ನೂ ತಂದೆಯ ಪ್ರಕರಣದಲ್ಲಿ ಶಾಮೀಲಾಗಿರುವ ಕಾರಣ ಅಬ್ಬಾಸ್ ಅನ್ಸಾರಿ ಕೂಡ ಜೈಲು ಶಿಕ್ಷೆಗೆ ಒಳಗಾಗಿದ್ದಾನೆ.

ಇಂದು ಶುಭ ಶುಕ್ರವಾರದ ಕಾರಣ ಸುಪ್ರೀಂ ಕೋರ್ಟ್‌ಗೆ ರಜೆ ಇರುವುದರಿಂದ ಅಬ್ಬಾಸ್ ಅನ್ಸಾರಿ ಅವರ ವಕೀಲರು ತುರ್ತು ವಿಚಾರಣೆಗೆ ಒತ್ತಾಯಿಸಿ ಸುಪ್ರೀಂ ಕೋರ್ಟ್‌ನ ರಜೆಯ ಅಧಿಕಾರಿಯನ್ನು ಸಂಪರ್ಕಿಸಿದ್ದಾರೆ.

ಮುಖ್ತಾರ್ ಅನ್ಸಾರಿ ಅವರ ಕುಟುಂಬ ಶನಿವಾರ ಬೆಳಿಗ್ಗೆ ಅವರ ಅಂತಿಮ ವಿಧಿಗಳನ್ನು ನಡೆಸುವ ಸಾಧ್ಯತೆಯಿದೆ. ಶನಿವಾರ ಬೆಳಿಗ್ಗೆ ಪ್ರಾರ್ಥನೆಯ ನಂತರ ಅವರ ಅಂತ್ಯಕ್ರಿಯೆ ನಡೆಸಲು ಸಿದ್ಧತೆ ನಡೆಸಿದ್ದೇವೆ ಮತ್ತು ಅವರ ದೇಹವನ್ನು ಬಂದಾದಿಂದ ಗಾಜಿಪುರಕ್ಕೆ ಸಾಗಿಸಲಾಗುತ್ತಿದೆ ಎಂದು ಅವರ ಕುಟುಂಬ ತಿಳಿಸಿದೆ.

ಬಂದಾ ಜಿಲ್ಲಾ ಜೈಲಿನಲ್ಲಿದ್ದ ದರೋಡೆಕೋರ ರಾಜಕಾರಣಿ ಮುಖ್ತಾರ್ ಬನ್ಸಾರಿ ಅವರು ಇಂದು ಉತ್ತರ ಪ್ರದೇಶದ ಬಂದಾದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments