Webdunia - Bharat's app for daily news and videos

Install App

ಓದಿಕೋ ಎಂದು ಗದರಿದ ತಂದೆ : 9ರ ಬಾಲಕಿ ನೇಣಿಗೆ ಶರಣು

Webdunia
ಶುಕ್ರವಾರ, 31 ಮಾರ್ಚ್ 2023 (10:32 IST)
ಚೆನ್ನೈ : ಆಡಿದ್ದು ಸಾಕು, ಹೊಗಿ ಓದಿಕೋ ಎಂದು ತಂದೆ ಗದರಿದ್ದಕ್ಕೆ 9 ವರ್ಷದ ಬಾಲಕಿ ನೊಂದು ನೇಣಿಗೆ ಶರಣಾಗಿರುವ ಆಘಾತಕಾರಿ ಘಟನೆ ತಮಿಳುನಾಡಿನಲ್ಲಿ ವರದಿಯಾಗಿದೆ.

ತಮಿಳುನಾಡಿದ ತಿರುವಳ್ಳೂರಿನಲ್ಲಿ ಬಾಲಕಿ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಸೋಮವಾರ ಬಾಲಕಿ ತನ್ನ ಸಂಬಂಧಿಕರ ಮನೆಯ ಬಳಿ ಆಟವಾಡುತ್ತಿದ್ದುದನ್ನು ನೋಡಿದ ತಂದೆ ಕೃಷ್ಣಮೂರ್ತಿ, ಆಡಿದ್ದು ಸಾಕು, ಹೋಗಿ ಓದಿಕೋ ಎಂದು ಮಗಳಿಗೆ ಗದರಿದ್ದಾರೆ. ಬಳಿಕ ಮನೆಯ ಬೀಗವನ್ನು ಮಗಳ ಕೈಯಲ್ಲಿ ನೀಡಿ ಅಲ್ಲಿಂದ ಹೊರಟು ಹೋಗಿದ್ದಾರೆ.

ಬೈಕ್ಗೆ ಇಂಧನ ತುಂಬಲು ತೆರಳಿದ್ದ ಕೃಷ್ಣಮೂರ್ತಿ ರಾತ್ರಿ 8:15ರ ವೇಳೆಗೆ ಮನೆಗೆ ವಾಪಸಾಗಿದ್ದಾರೆ. ಆದರೆ ಮನೆ ಒಳಗಿಂದ ಬೀಗ ಹಾಕಲಾಗಿದ್ದು, ಮಗಳನ್ನು ಎಷ್ಟೇ ಕರೆದರೂ ಆಕೆ ಪ್ರತಿಕ್ರಿಯಿಸಿರಲಿಲ್ಲ. ಬಳಿಕ ಗಾಬರಿಗೊಂಡ ಕೃಷ್ಣಮೂರ್ತಿ ಮನೆಯ ಕಿಟಕಿಯನ್ನು ಒಡೆದು ಒಳಗೆ ಹೋಗಿದ್ದಾರೆ. 

ಈ ವೇಳೆ ಬಾಲಕಿ ನೇಣಿಗೆ ಕೊರಳೊಡ್ಡಿರುವ ಆಘಾತಕಾರಿ ದೃಶ್ಯ ತಂದೆಯ ಕಣ್ಣಿಗೆ ಬಿದ್ದಿದೆ. ಬಾಲಕಿ ಹತ್ತಿಯ ಟವೆಲ್ನಲ್ಲಿ ನೇತಾಡುತ್ತಿದ್ದು, ಉಸಿರಾಡಲು ಕಷ್ಟಪಡುತ್ತಿದ್ದಳು ಎನ್ನಲಾಗಿದೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಬಾಲಕಿಯನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆಕೆ ಅಲ್ಲಿ ಮೃತಪಟ್ಟಿದ್ದಾಳೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments