Webdunia - Bharat's app for daily news and videos

Install App

ಸುಪ್ರೀಂ ಕೋರ್ಟ್ ಗೆ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಿ ಆಯ್ಕೆ ಸಾಧ್ಯತೆ? : 9 ಹೆಸರುಗಳನ್ನು ಅನುಮೋದಿಸಿದ ಕೇಂದ್ರ

Webdunia
ಗುರುವಾರ, 26 ಆಗಸ್ಟ್ 2021 (11:04 IST)
ನವದೆಹಲಿ : ಮೂವರು ಮಹಿಳಾ ನ್ಯಾಯಾಧೀಶರನ್ನು ಒಳಗೊಂಡಂತೆ ಉನ್ನತ ನ್ಯಾಯಾಲಯಕ್ಕೆ ನೇಮಕ ಮಾಡಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದ ಎಲ್ಲಾ ಒಂಬತ್ತು ಹೆಸರುಗಳನ್ನು ಕೇಂದ್ರವು ಅನುಮೋದಿಸಿದೆ.

ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಬಿ.ವಿ.ನಾಗರತ್ನಾ, ತೆಲಂಗಾಣ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಹಿಮಾ ಕೊಹ್ಲಿ, ಗುಜರಾತ್ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ವಿಕ್ರಮ್ ನಾಥ್, ಸಿಕ್ಕಿಂ ಮುಖ್ಯ ನ್ಯಾಯಮೂರ್ತಿ ಜೆ.ಕೆ.ಮಹೇಶ್ವರಿ, ಕೇರಳ ಹೈಕೋರ್ಟ್ ನ ನ್ಯಾಯಮೂರ್ತಿ ಸಿಟಿ ರವಿಕುಮಾರ್, ಮದ್ರಾಸ್ ಹೈಕೋರ್ಟ್ ನ ನ್ಯಾಯಮೂರ್ತಿ ಎಂ.ಎಂ.ಸುಂದ್ರೇಶ್ ಅವರ ಹೆಸರುಗಳನ್ನು ಕೊಲಿಜಿಯಂ ಶಿಫಾರಸು ಮಾಡಿತ್ತು. ಗುಜರಾತ್ ಹೈಕೋರ್ಟ್ ನ ನ್ಯಾಯಮೂರ್ತಿ ಬೆಲಾ ಎಂ ತ್ರಿವೇದಿ ಮತ್ತು ಹಿರಿಯ ವಕೀಲ ಪಿಎಸ್ ನರಸಿಂಹ ಶಿಫಾರಸು ಮಾಡಿದೆ.
ಸುಪ್ರೀಂ ಕೋರ್ಟ್ ನ ಪ್ರಸ್ತುತ ಬಲ 24 . ಒಂಬತ್ತು ನ್ಯಾಯಾಧೀಶರ ಸೇರ್ಪಡೆಯೊಂದಿಗೆ, ಉನ್ನತ ನ್ಯಾಯಾಲಯದಲ್ಲಿ ಇನ್ನೂ ಒಬ್ಬ ನ್ಯಾಯಾಧೀಶರ ಹುದ್ದೆ ಖಾಲಿ ಇರುತ್ತದೆ.
ಶಿಫಾರಸು ಮಾಡಲಾದ ಹೆಸರುಗಳಲ್ಲಿ, ನ್ಯಾಯಮೂರ್ತಿ ನಾಗರತ್ನಾ ಅವರು ಸೆಪ್ಟೆಂಬರ್ 25 ರಿಂದ ಅಕ್ಟೋಬರ್ 29, 2027ರವರೆಗೆ ಕೇವಲ ಒಂದು ತಿಂಗಳ ಕಾಲ ದೇಶದ ಮೊದಲ ಮಹಿಳಾ ಮುಖ್ಯ ನ್ಯಾಯಾಧೀಶರಾಗಬಹುದು.
ಜನವರಿ 26, 1950 ರಂದು ಅಸ್ತಿತ್ವಕ್ಕೆ ಬಂದ ಸರ್ವೋಚ್ಚ ನ್ಯಾಯಾಲಯವು ಪ್ರಾರಂಭವಾದಾಗಿನಿಂದ ಕೆಲವೇ ಮಹಿಳಾ ನ್ಯಾಯಾಧೀಶರನ್ನು ಕಂಡಿದೆ ಮತ್ತು ಕಳೆದ 71 ವರ್ಷಗಳಲ್ಲಿ 1989 ರಲ್ಲಿ ಎಂ ಫಾತಿಮಾ ಬೀವಿಯಿಂದ ಪ್ರಾರಂಭಿಸಿ ಕೇವಲ ಎಂಟು ಮಹಿಳಾ ನ್ಯಾಯಾಧೀಶರನ್ನು ನೇಮಿಸಿದೆ.
ನ್ಯಾಯಮೂರ್ತಿ ನಾಗರತ್ನಾ ಯಾರು?
ಅಕ್ಟೋಬರ್ 30, 1962 ರಂದು ಜನಿಸಿದ ನ್ಯಾಯಮೂರ್ತಿ ನಾಗರತ್ನಾ ಅವರು ಮಾಜಿ ಸಿಜೆಐ ಇ.ಎಸ್. ವೆಂಕಟರಾಮಯ್ಯ ಅವರ ಮಗಳು. ಅವರು ಅಕ್ಟೋಬರ್ 28, 1987ರಂದು ಬೆಂಗಳೂರಿನಲ್ಲಿ ವಕೀಲರಾಗಿ ಸೇರಿಕೊಂಡರು ಮತ್ತು 'ಸಂವಿಧಾನ, ವಾಣಿಜ್ಯ, ವಿಮೆ ಮತ್ತು ಸೇವೆ ಇತ್ಯಾದಿಗಳಿಗೆ ಸಂಬಂಧಿಸಿದ ಕ್ಷೇತ್ರದಲ್ಲಿ ಅಭ್ಯಾಸ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಾಧಿಕಾರಿ ಏನು ದಾವುದ್ ಇಬ್ರಾಹಿಂ ನಾ, ಇದೆಲ್ಲ ವ್ಯವಸ್ಥಿತ ಸಂಚು: ಪ್ರತಾಪ್ ಸಿಂಹ ಆಕ್ರೋಶ

ರಾಹುಲ್ ಗಾಂಧಿ ಅಜ್ಜಿಯೇ ಮತಗಳ್ಳತನದಿಂದ ಗೆದ್ದಿದ್ದರು: ಆರಗ ಜ್ಞಾನೇಂದ್ರ

ರಾಹುಲ್ ಗಾಂಧಿ ಅವರ ದಿಟ್ಟ ಹೋರಾಟಕ್ಕೆ ಸಂಪೂರ್ಣ ಬೆಂಬಲ: ಡಿಸಿಎಂ ಡಿ.ಕೆ. ಶಿವಕುಮಾರ್

ಮತಗಳ್ಳತನ, ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕತೆಯಿಲ್ಲ: ಸಿದ್ದರಾಮಯ್ಯ

ಅನೇಕ ಕ್ಷೇತ್ರಗಳಲ್ಲಿ ಮತಗಳ್ಳತನ: ಪ್ರಧಾನಿ, ಚುನಾವಣಾ ಆಯೋಗದ ವಿರುದ್ಧ ಬೆಂಗಳೂರಿನಲ್ಲಿ ಗುಡುಗಿದ ರಾಹುಲ್‌

ಮುಂದಿನ ಸುದ್ದಿ
Show comments