ಚುನಾವಣಾ ಬಾಂಡ್‌ಗಳಿಂದ ಬಿಜೆಪಿಯ ಖಜಾನೆ ಭರ್ತಿ: ಮಲ್ಲಿಕಾರ್ಜುನ ಖರ್ಗೆ ಆರೋಪ

Sampriya
ಗುರುವಾರ, 21 ಮಾರ್ಚ್ 2024 (12:47 IST)
Photo Courtesy X
ನವದೆಹಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಚುನಾವಣಾ ಬಾಂಡ್‌ಗಳ ವಿಷಯದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಇಂದು ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಜಂಟಿ ಸುದ್ದಿಗೋಷ್ಠಿ ನಡೆಸಿದರು.

ಚುನಾವಣಾ ಬಾಂಡ್‌ಗಳಿಂದ ಬಿಜೆಪಿಯ ಖಜಾನೆ ತುಂಬಿದ. ಆದರೆ ನಮ್ಮ ಪಕ್ಷದ ಬ್ಯಾಂಕ್‌ ಖಾತೆಯನ್ನು ಫ್ರೀಜ್ ಮಾಡಲಾಗಿದೆ. ವಿರೋಧ ಪಕ್ಷಗಳ ಬ್ಯಾಂಕ್‌ ಖಾತೆಯನ್ನು ಗುರಿಯಾಗಿಸಲಾಗಿದೆ. ನಮ್ಮ ಪಕ್ಷಕ್ಕೆ ಶೇ11ರಷ್ಟು ಹಣ ಸಂಗ್ರಹವಾಗಿದೆ. ಆದರೆ ಚುನಾವಣಾ ಬಾಂಡ್‌ಗಳಿಂದ ಬಿಜೆಪಿಗೆ ಶೇ56ರಷ್ಟು ಹಣ ಸಂಗ್ರಹವಾಗಿದೆ ಎಂದರು.

ಪ್ರಜಾಪ್ರಭುತ್ವಕ್ಕೆ ನ್ಯಾಯಸಮ್ಮತ ಚುನಾವಣೆ ಅಗತ್ಯವಾಗಿದ್ದು, ಹೀಗಾದರೆ ನಡೆಯಲು ಸಾಧ್ಯನೇ ಎಂದು ಪ್ರಶ್ನಿಸಿದರು. ಆಡಳಿತದ ಅಧಿಕಾರದಲ್ಲಿರುವವರು ಸಂಪನ್ಮೂಲಗಳ ಮೇಲೆ ಏಕಸ್ವಾಮ್ಯವನ್ನು ಹೊಂದಿರಬಾರದು, ಸರ್ಕಾರ ಮಾಧ್ಯಮದ ಮೇಲೂ ಏಕಸ್ವಾಮ್ಯವನ್ನು ಹೊಂದಿರಬಾರದು, ಇಡಿ, ಚುನಾವಣಾ ಆಯೋಗ, ಐಟಿಯಂತಹ ಸಾಂವಿಧಾನಿಕ ಮತ್ತು ನ್ಯಾಯಾಂಗ ಸಂಸ್ಥೆಗಳ ಮೇಲೆ ಆಡಳಿತ ಪಕ್ಷವು ನೇರ ಅಥವಾ ಪರೋಕ್ಷ ನಿಯಂತ್ರಣವನ್ನು ಹೊಂದಿರಬಾರದು ಎಂದು ಕೇಂದ್ರದ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆ

ಧರ್ಮಸ್ಥಳ ಬುರುಡೆ ಪ್ರಕರಣ ಪ್ರಮುಖ ಹಂತದಲ್ಲಿರುವಾಗ ಮಹತ್ವದ ಬೆಳವಣಿಗೆ

ದೇವರಿಗೆ ಬಿಟ್ಟಿದ್ದ ಗೋವಿನ ಕಾಲು ಕಡಿದ ಪಾಪಿಗಳು, ಕ್ರಮಕ್ಕೆ ಒತ್ತಾಯ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಸಚಿವ ಮಧು ಬಂಗಾರಪ್ಪ ಸ್ಫೋಟಕ ಹೇಳಿಕೆ

ಮೊಬೈಲ್ ವಾಲ್ಯೂಮ್ ಕಡಿಮೆ ಮಾಡಿ ಎಂದಿದ್ದಕ್ಕೆ ಮಹಿಳೆಯಿಂದ ಪೆಪ್ಪರ್ ಸ್ಪ್ರೇ, Video

ಮುಂದಿನ ಸುದ್ದಿ
Show comments