ಕಾಣೆಯಾಗಿರುವ ಮಕ್ಕಳಿಗೆ ಸಂಬಂಧಿಸಿದಂತೆ ವರದಿ ನೀಡಿ ಎಂದು ರಾಜ್ಯಸರ್ಕಾರಕ್ಕೆ ಸುಪ್ರೀಂಕೋರ್ಟ್ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಮುಖ್ಯ ನ್ಯಾ. ಎಚ್.ಎಲ್. ದತ್ತು ಅವರ ತ್ರಿಸದಸ್ಯ ಪೀಠ ಈ ಆದೇಶ ನೀಡಿದೆ.
1236 ಮಕ್ಕಳು 2012-13ರ ಸಾಲಿನಲ್ಲಿ ಕಾಣೆಯಾಗಿವೆ ಎಂದು ವರದಿಯಾಗಿತ್ತು. 6 ವಾರಗಳಲ್ಲಿ ಈ ಸಂಬಂಧ ವರದಿ ಸಲ್ಲಿಸಲು ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಬಚ್ಪನ್ ಬಚಾವೋ ಎಂಬ ಎನ್ಜಿಒ ಈ ಸಂಬಂಧ ಸುಪ್ರೀಂಕೋರ್ಟ್ನಲ್ಲಿ ಪಿಐಎಲ್ ಸಲ್ಲಿಸಿದೆ.
2012-13ರ ಸಾಲಿನಲ್ಲಿ ಕಾಣೆಯಾದ ಮಕ್ಕಳ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರೂ ಇದುವರೆಗೆ ಆ ಮಕ್ಕಳ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಇಂತಹ ಮಕ್ಕಳ ಸ್ಥಿತಿಗತಿ ಹೇಗಿದೆ, ಆ ಮಕ್ಕಳು ಬದುಕಿದ್ದಾರೋ ಇಲ್ಲವೋ ಎಂಬ ಬಗ್ಗೆ ಪೊಲೀಸರಿಗೆ ಯಾವುದೇ ಸುಳಿವು ಸಿಕ್ಕಿಲ್ಲ.
ಈ ಹಿನ್ನೆಲೆಯಲ್ಲಿ ಬಚ್ಪನ್ ಬಚಾವೋ ಎನ್ಜಿಒ ಸಂಸ್ಥೆಯ ಪಿಐಎಲ್ ಅರ್ಜಿಯನ್ನು ಪರಿಗಣಿಸಿದ ಕೋರ್ಟ್ 6 ವಾರಗಳಲ್ಲಿ ಈ ಸಂಬಂಧ ವರದಿ ಸಲ್ಲಿಸಿ ಎಂದು ರಾಜ್ಯಸರ್ಕಾರಕ್ಕೆ ಸೂಚನೆ ನೀಡಿದೆ.