Select Your Language

Notifications

webdunia
webdunia
webdunia
webdunia

ಲಾಲು ವಿರುದ್ಧ ಎಫ್ಐಆರ್ ದಾಖಲು

ಲಾಲು ವಿರುದ್ಧ ಎಫ್ಐಆರ್ ದಾಖಲು
ಅರಾರಿಯಾ , ಬುಧವಾರ, 7 ಅಕ್ಟೋಬರ್ 2015 (09:18 IST)
ಹಿಂದುಗಳು ಸಹ ಗೋಮಾಂಸ ತಿನ್ನುತ್ತಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿ ವ್ಯಾಪಕ ಖಂಡನೆಗೆ ಗುರಿಯಾಗಿರುವ ಆರ್‌ಜೆ‌ಡಿ ಪಕ್ಷದ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಪಿಂಟು ಕುಮಾರ್ ಎಂಬುವರು ಸಲ್ಲಿಸಿದ ದೂರಿನ ಆಧಾರದ ಮೇಲೆ ನರ್ಪತ್ ಗಂಜ್ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಪಟ್ನಾ ಮತ್ತು ಮುಜಾಫರ್​ಪುರ್ ನ್ಯಾಯಾಲಯಗಳಲ್ಲಿ ಕೂಡ ಲಾಲು ವಿರುದ್ಧ ದೂರು ದಾಖಲಾಗಿದೆ.
 
ಲಾಲೂ ಪ್ರಸಾದ್ ಯಾದವ್ ಅವರ ಈ ಹೇಳಿಕೆ ಬಹುಸಂಖ್ಯಾತ ಹಿಂದುಗಳ ಧಾರ್ವಿುಕ ಭಾವನೆಗೆ ಧಕ್ಕೆ ತಂದಿದೆ. ಇದರಿಂದ ಕಾನೂನು ಸುವ್ಯವಸ್ಥೆಗೆ ಸಹ  ಭಂಗವುಂಟಾಗುವ ಸಾಧ್ಯತೆ ಇದೆ. ಆದ್ದರಿಂದ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪಿಂಟು ಕುಮಾರ್ ದೂರಿನಲ್ಲಿ ಆಗ್ರಹಿಸಿದ್ದಾರೆ. 
 
ಹಿಂದೂಗಳು ಮತ್ತು ವಿದೇಶದಲ್ಲಿರುವ ಭಾರತೀಯರೂ ಗೋಮಾಂಸ ಸೇವನೆ ಮಾಡುತ್ತಾರೆ ಎಂದು ಲಾಲು ಪ್ರಸಾದ್ ಹೇಳಿದ್ದರು.ಲಾಲು  ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು, ಲಾಲು ಪ್ರಸಾದ್ ತನ್ನ ಹೇಳಿಕೆಯನ್ನು ಹಿಂಪಡೆಯದಿದ್ದರೆ, ನಾವು ಅವರ ಮನೆಯ ಮುಂದೆ ಪ್ರತಿಭಟನೆ ನಡೆಸಲಿದ್ದೇವೆ ಎಂದು ಬಿಜೆಪಿ ನಾಯಕ ಗಿರಿರಾಜ್ ಸಿಂಗ್ ಹೇಳಿದ್ದರು.
 
ಲಾಲು ಪ್ರಸಾದ್‌ ಅವರ ಈ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. 

Share this Story:

Follow Webdunia kannada