Webdunia - Bharat's app for daily news and videos

Install App

ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಸುಲಿಗೆ ಆರೋಪ: ಎಫ್ಐಆರ್ ದಾಖಲು

Krishnaveni K
ಶನಿವಾರ, 28 ಸೆಪ್ಟಂಬರ್ 2024 (11:49 IST)
ನವದೆಹಲಿ: ಚುನಾವಣಾ ಬಾಂಡ್ ಗಳ ಮೂಲಕ ಸುಲಿಗೆ ಮಾಡಲಾಗಿದೆ ಎಂದು ಆರೋಪಿಸಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್ಐಆರ್ ದಾಖಲಿಸಲು ಕೋರ್ಟ್ ಆದೇಶ ನೀಡಿದೆ.

ತಿಲಕ್ ನಗರ ಪೊಲೀಸರಿಗೆ ಎಫ್ಐಆರ್ ದಾಖಲಿಸಲು 42 ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ. ಈ ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 10 ರಂದು ನಡೆಸಲಿದೆ. ನಿರ್ಮಲಾ ಸೀತಾರಾಮನ್ ಅಲ್ಲದೆ ರಾಜ್ಯದ ಬಿಜೆಪಿ ನಾಯಕರಾದ ನವೀನ್ ಕುಮಾರ್ ಕಟೀಲ್, ಬಿ ವೈ ವಿಜಯೇಂದ್ರ ಸೇರಿದಂತೆ ಕೆಲವರ ವಿರುದ್ಧವೂ ದೂರು ದಾಖಲಾಗಿದೆ.

ಜನಾಧಿಕಾರಿ ಸಂಘರ್ಷ ಪರಿಷತ್ ನ ಆದರ್ಶ ಆರ್. ಅಯ್ಯರ್ ಎಂಬವರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ದೂರು ಸಲ್ಲಿಸಿದ್ದಾರೆ. ದೂರಿನ ವಿಚಾರಣೆ ನಡೆಸಿದ ಕೋರ್ಟ್ ದೂರಿನ ಪ್ರತಿಯನ್ನು ತಿಲಕ್ ನಗರ ಪೊಲೀಸ್ ಠಾಣೆಗೆ ಕಳುಹಿಸಲು ಸೂಚನೆ ನೀಡಿದೆ. ಅಲ್ಲದೆ ಅಕ್ಟೋಬರ್ 10 ಕ್ಕೆ ಮುಂದಿನ ವಿಚಾರಣೆ ನಡೆಸುವುದಾಗಿ ಹೇಳಿದೆ.

ಏನಿದು ಆರೋಪ?
ಚುನಾವಣಾ ಬಾಂಡ್ ಮೂಲಕ ಕಾರ್ಪೋರೇಟ್ ಕಂಪನಿಗಳ ಸುಲಿಗೆ ಮಾಡಲಾಗಿದೆ. ಬೆದರಿಸಿ 8,000 ಕೋಟಿ ರೂ. ವಸೂಲಿ ಮಾಡಲಾಗಿದೆ. ಹಣ ನೀಡದವರಿಗೆ ಇಡಿ ದಾಳಿಯ ಬೆದರಿಕೆ ಹಾಕಲಾಗಿದೆ. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ನವೀನ್ ಕುಮಾರ್ ಕಟೀಲ್, ಬಿ ವೈ ವಿಜಯೇಂದ್ರ ಹಣ ಸಂಗ್ರಹಣೆ ಮಾಡಿದ್ದಾರೆ. ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಅಧಿಕಾರ ದುರ್ಬಳಕೆ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪ ಹೊರಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಂಡಮಾರುತ ಎಫೆಕ್ಟ್‌, ದೇಶದ ಈ ಭಾಗದಲ್ಲಿ ಆ.7ರ ವರೆಗೆ ಭಾರೀ ಮಳೆ

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್‌ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಸೇನಾಧಿಕಾರಿ, ಕಾರಣ ಇಲ್ಲಿದೆ

ಭಾರೀ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ರಾಷ್ಟ್ರಪತಿಯನ್ನು ಭೇಟಿಯಾದ ಪ್ರಧಾನಿ ಮೋದಿ

ಉತ್ತರಪ್ರದೇಶ: ಪೃಥ್ವಿನಾಥ ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 11 ಮಂದಿ

ಮೀರತ್‌ ಭಯಾನಕ ಅಪರಾಧ: 7 ತಿಂಗಳ ಗರ್ಭಿಣಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ

ಮುಂದಿನ ಸುದ್ದಿ
Show comments