Webdunia - Bharat's app for daily news and videos

Install App

ಅಣ್ಣಾಡಿಎಂಕೆ ಚಿಹ್ನೆಗಾಗಿ ಲಂಚದ ಆರೋಪ: ಟಿಟಿವಿ ದಿನಕರನ್ ವಿರುದ್ಧ ಎಫ್ಐಆರ್

Webdunia
ಸೋಮವಾರ, 17 ಏಪ್ರಿಲ್ 2017 (10:58 IST)
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಸೇರಿರುವ ಶಶಿಕಲಾ ಬಣಕ್ಕೆ ಮತ್ತಷ್ಟು ಸಂಕಷ್ಟ ಎದುರಾಗಿದೆ  ಚುನಾವಣಾ ಆಯೋಗ ಸ್ಥಗಿತಗೊಳಿಸಿರುವ ಅಣ್ಣಾಡಿಎಂಕೆಯ ಎರಡು ಎಲೆ ಚಿಹ್ನೆಗಾಗಿ ಮಧ್ಯವರ್ತಿ ಮೂಲಕ ಚುನಾವಣಾ ಆಯೋಗಕ್ಕೆ ಲಂಚ ನೀಡಿಕೆ ಆರೋಪದಡಿ ಅಣ್ಣಾಡಿಎಂಕೆ ಮುಖಂಡ ಟಿಟಿವಿ ದಿನಕರನ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
 

1.5 ಕೋಟಿ ರೂ. ಹಣದೊಂದಿಗೆ ಮಧ್ಯವರ್ತಿ ಚಂದ್ರಶೇಖರ್ ಎಂಬುವವನನ್ನ ಬಂಧಿಸಿರುವ ಸಿಸಿಬಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ದಿನಕರನ್`ಗೆ ಸಮನ್ಸ್ ಜಾರಿ ಮಾಡಿದ್ದಾರೆ. ಬಂಧಿತನಿಂದ ಬಿಎಂಡಬ್ಲ್ಯೂ  ಮತ್ತು ಮರ್ಸಿಡಿಸ್ ಕಾರನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಟಿಟಿವಿ ದಿನಕರನ್ ಶಶಿಕಲಾ ಸೋದರಳಿಯನಾಗಿದ್ದು, ಚುನಾವಣಾ ಆಯೋಗ ಸ್ಥಗಿತಗೊಳಿಸಿರುವ ಎರಡು ಎಲೆ  ಚಿಹ್ನೆಯನ್ನ ಪಡೆಯಲು ಮಧ್ಯವರ್ತಿ ಮೂಲಕ ಲಂಚದ ಆಮಿಷವೊಡ್ಡಿದ್ದ. ಒಂದೊಮ್ಮೆ ಶಶಿಕಲಾ ಬಣಕ್ಕೆ ಚಿಹ್ನೆ ದೊರೆತರೆ 60 ಕೋಟಿ ರೂ. ನೀಡುವುದಾಗಿ ದಿನಕರನ್, ಮಧ್ವರ್ತಿ ಮೂಲಕ ಲಂಚದ ಆಫರ್ ಕೊಟ್ಟಿದ್ದ ಎಂಬ ಆರೋಪ ಕೇಳಿಬಂದಿದೆ.

ಜಯಲಲಿತಾ ನಿಧನದ ಬಳಿಕ ತೆರವಾಗಿದ್ದ ಆರ್.ಕೆ. ನಗರ ಉಪಚುನಾವಣೆಯಲ್ಲಿ ಪನ್ನೀರ್ ಸೆಲ್ವಂ ಬಣ ಮತ್ತು ಶಶಿಕಲಾ ಬಣದ ನಡುವೆ ಎರಡು ಚಿಹ್ನೆಗಾಗಿ ಪೈಪೋಟಿ ಏರ್ಪಟ್ಟ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಈ ಚಿಹ್ನೆಯನ್ನ ಸ್ಥಗಿತಗೊಳಿಸಿ ಇಬ್ಬರಿಗೂ ಬೇರೆ ಬೇರೆ ಚಿಹ್ನೆ ನೀಡಿತ್ತು. ಬಳಿಕ 89 ಕೋಟಿ ರೂ. ಹಣ ಈ ಕ್ಷೇತ್ರದಲ್ಲಿ ಹಂಚಿಕೆಯಾಗಿದೆ ಎಂಬ ಾರೋಪದ ಬಳಿಕ ಚುನಾವಣೆಯನ್ನೇ ರದ್ದು ಮಾಡಲಾಯ್ತು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments