Webdunia - Bharat's app for daily news and videos

Install App

ಸೇನಾಶಸ್ತ್ರಾಸ್ತ್ರ ಡಿಪೋದಲ್ಲಿ ಅಗ್ನಿ ಅಕಸ್ಮಿಕ: 17 ಸೈನಿಕರ ಸಾವು

Webdunia
ಮಂಗಳವಾರ, 31 ಮೇ 2016 (11:27 IST)
ಭಾರತೀಯ ಸೇನೆಯ ಶಸ್ತ್ರಾಸ್ತ್ರ ಡಿಪೋದಲ್ಲಿ ಭಾರಿ ಪ್ರಮಾಣದ ಅಗ್ನಿ ಅಕಸ್ಮಿಕ ಸಂಭವಿಸಿದ್ದು, ಘಟನೆಯಲ್ಲಿ 17 ಸೈನಿಕರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ
 
ಅಗ್ನಿ ದುರಂತದಲ್ಲಿ ಇಬ್ಬರು ಸೇನಾಧಿಕಾರಿಗಳು 15 ಭದ್ರತಾ ಸಿಬ್ಬಂದಿಗಳು ಸಾವನ್ನಪ್ಪಿದ್ದು, ಇತರ 17 ಮಂದಿ ಸೈನಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಸೇನಾವಕ್ತಾರರು ಖಚಿತಪಡಿಸಿದ್ದಾರೆ.
 
ಸೇನಾ ಡಿಪೋದಲ್ಲಿ ಅಗ್ನಿ ದುರಂತ ಸಂಭವಿಸಿರುವುದಕ್ಕೆ ನಿಖರವಾದ ಕಾರಣಗಳು ಪತ್ತೆಯಾಗಿಲ್ಲ. ಇಂದು ಬೆಳಗಿನ ಜಾವ 2 ಗಂಟೆಗೆ ಸ್ಫೋಟದ ಶಬ್ದವಾದ ನಂತರ ಬೆಂಕಿ ಹೊತ್ತಿಕೊಂಡಿತು ಎನ್ನಲಾಗಿದೆ.
 
ನಾಗ್ಪುರ್‌ದಿಂದ 110 ಕಿ.ಮೀ ದೂರದಲ್ಲಿರುವ ಪುಲ್‌ಗಾಂವ್‌ನಲ್ಲಿರು ಸೇನಾ ಡಿಪೋದಲ್ಲಿ ಹೊತ್ತಿಕೊಂಡ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದ್ದರೂ ಮುನ್ನೆಚ್ಚರಿಕೆ ಕ್ರಮವಾಗಿ ಹತ್ತಿರದಲ್ಲಿರುವ ಗ್ರಾಮಗಳನ್ನು ಜನರಿಂದ ಮುಕ್ತಗೊಳಿಸಲಾಗಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.   
 
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವನ್ನು ಪುಲ್ಗಾಂವ್‌ದಿಂದ 40 ಕಿ.ಮೀ ದೂರದಲ್ಲಿರುವ ಹತ್ತಿರದ ವಾರ್ದಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
 
ಹಿರಿಯ ಸೇನಾಧಿಕಾರಿಗಳು ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದ್ದು, ಕೇಂದ್ರ ರಕ್ಷಣಾ ಖಾತೆ ಸಚಿವ ಮನೋಹರ್ ಪರಿಕ್ಕರ್ ನಾಳೆ ಪುಲ್ಗಾಂವ್‌ಗೆ ಭೇಟಿ ನೀಡಲಿದ್ದಾರೆ ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ.  

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾರಲು ಪರ್ಮಿಷನ್ ಬೇಕಾಗಿಲ್ಲ ಎಂದ ಶಶಿ ತರೂರ್: ಮುಂದಿನ ಸಲ ಬಿಜೆಪಿ ಪಕ್ಕಾ ಎಂದ ನೆಟ್ಟಿಗರು

ವಾಲ್ಮೀಕಿ ಹಗರಣ ಎಷ್ಟು ಕೋಟಿ, ವಂಚನೆಯಾಗಿದ್ದು ಹೇಗೆ ಎಂದ ಬಿಜೆಪಿ ನಾಯಕ ಬಂಗಾರು ಹನುಮಂತು

ವನ್ಯಜೀವಿ, ಮಾನವ ಸಂಘರ್ಷವನ್ನು ಪರಿಗಣಿಸದಿರುವುದೇ ಹುಲಿಗಳ ಸಾವಿಗೆ ಕಾರಣ: ಸುನೀಲ್ ಕುಮಾರ್‌ ವಿಷಾದ

ಅಮರನಾಥ ಯಾತ್ರೆಗೆ ಯಾತ್ರಿಕರ ಸಂಖ್ಯೆಯಲ್ಲಿ ಇಳಿಕೆ, ಇದೇ ಕಾರಣ ಎಂದ ಗವರ್ನರ್‌

ಬೇಸತ್ತು ಹೋದೆ: ಕ್ಯಾನ್ಸರ್‌ ರೋಗಿ ಅಜ್ಜಿಯನ್ನು ಬೀದಿಯಲ್ಲಿ ಬಿಡಲು ಕಾರಣ ಕೊಟ್ಟ ಮೊಮ್ಮಗ

ಮುಂದಿನ ಸುದ್ದಿ
Show comments