Select Your Language

Notifications

webdunia
webdunia
webdunia
webdunia

ಕೊರೋನಾ ಆಸ್ಪತ್ರೆಗೆ ಬೆಂಕಿ: 8 ಸಾವು, ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಕೊರೋನಾ ಆಸ್ಪತ್ರೆಗೆ ಬೆಂಕಿ: 8 ಸಾವು, ಪರಿಹಾರ ಘೋಷಿಸಿದ ಪ್ರಧಾನಿ ಮೋದಿ
ಅಹಮ್ಮದಾಬಾದ್ , ಗುರುವಾರ, 6 ಆಗಸ್ಟ್ 2020 (10:31 IST)
ಅಹಮ್ಮದಾಬಾದ್: ಗುಜರಾತ್ ನ ಕೊರೋನಾ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತವಾದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, 40 ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಲಾಗಿದೆ.


ಘಟನೆ ಬಗ್ಗೆ ಗುಜರಾತ್ ಸಿಎಂ ವಿಜಯ್ ರೂಪಾನಿ ತನಿಖೆಗೆ ಆದೇಶಿಸಿದ್ದಾರೆ. ಪ್ರಧಾನಿ ಮೋದಿ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ನವರಂಗಪುರದ ಖಾಸಗಿ ಆಸ್ಪತ್ರೆಯ ಐಸಿಯು ವಾರ್ಡ್ ನಲ್ಲಿ ದುರಂತ ಸಂಭವಿಸಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳ ಬೆಂಕಿ ನಂದಿಸುವ ಕೆಲಸ ಮಾಡಿದೆ. ಇದೀಗ ಉಳಿದ ರೋಗಿಗಳನ್ನು ಸರ್ದಾರ್ ವಲ್ಲಭಾಯಿ ಪಟೇಲ್ ಆಸ್ಪತ್ರೆಗೆ ವರ್ಗಾಯಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಗಡಿಯಿಂದ ಹಿಂದೆ ಸರಿಯುವ ನಾಟಕ ಮಾಡಿದ್ದ ಚೀನಾ ಸೇನೆ ಬಣ್ಣ ಬಯಲು