Webdunia - Bharat's app for daily news and videos

Install App

ಲಕ್ಷ್ಮೀಬಾಯಿ ಆಸ್ಪತ್ರೆಯಲ್ಲಿ ಅಗ್ನಿ ದುರಂತ: ಮತ್ತೆರಡು ಮಕ್ಕಳು ಸಾವು, ಸಾವಿನ ಸಂಖ್ಯೆ 17ಕ್ಕೆ ಏರಿಕೆ

Sampriya
ಭಾನುವಾರ, 24 ನವೆಂಬರ್ 2024 (14:46 IST)
ಲಖನೌ: ‌ಝಾನ್ಸಿ ನಗರದ ಮಹಾರಾಣಿ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸಂಭವಿಸಿದ್ದ ಅಗ್ನಿ ಅವಘಡದ ವೇಳೆ ರಕ್ಷಣೆಯಾದ 39ಮಕ್ಕಳ ಪೈಕಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಈ ಮೂಲಕ ಈ ದುರ್ಘಟನೆಯಲ್ಲಿ ಮೃತಪಟ್ಟ ಶಿಶುಗಳ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.

ನವೆಂಬರ್ 15 ರ ರಾತ್ರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ದುರ್ಘಟನೆಯಲ್ಲಿ 10 ನವಜಾತ ಶಿಶುಗಳು ಸಜೀವ ದಹನಗೊಂಡಿದ್ದವು. ಅಲ್ಲದೆ, 39 ಮಕ್ಕಳನ್ನು ರಕ್ಷಣೆ ಮಾಡಲಾಗಿತ್ತು.

ಈ ಸಂಬಂಧ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ ನರೇಂದ್ರ ಸಿಂಗ್ ಸೆಂಗಾರ್  ಪ್ರತಿಕ್ರಿಯಿಸಿ, ರಕ್ಷಣೆಯಾದ  39 ಶಿಶುಗಳ ಪೈಕಿ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆಂದು ಹೇಳಿದರು.

ಇಬ್ಬರು ಮಕ್ಕಳ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಸಾವಿಗೆ ಅನಾರೋಗ್ಯ ಕಾರಣ ಎಂದು ತಿಳಿದುಬಂದಿದೆ. ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ. ಎರಡೂ ಶಿಶುಗಳ ಜನನ ತೂಕ 800 ಗ್ರಾಂ ಇತ್ತು. ಒಂದು ಮಗುವಿನ ಹೃದಯದಲ್ಲಿ ರಂಧ್ರವಿತ್ತು ಎಂದು ಮಾಹಿತಿ ನೀಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments